ಮಂಡ್ಯ

ಮತ ಕಳ್ಳತನ ವಿರುದ್ಧ ಆ.5ಕ್ಕೆ ಬೃಹತ್ ಪ್ರತಿಭಟನಾ ರ‍್ಯಾಲಿ : ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ನಡೆಸಲಾಗುವುದು ಎಂದು ಸಚಿವ ಎನ್.‌ ಚಲುವರಾಯಸ್ವಾಮಿ ಹೇಳಿದರು.

ಶನಿವಾರದಂದು ಜಿಲ್ಲಾ ಪ್ರೆಸ್ ಕ್ಲಬ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ, ಪ್ರತಿಭಟನೆಯಲ್ಲಿ ಸುರ್ಜೇವಾಲ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಸೇರಿ ಎಲ್ಲಾ ಮಂತ್ರಿಗಳು ಶಾಸಕರ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಭಾಗವಹಿಸಬೇಕು, ಜಿಲ್ಲೆಯಿಂದ ಕನಿಷ್ಠ 5 ಸಾವಿರ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಸಾಧ್ಯವಾದಷ್ಟು ಯುವಕರು ಭಾಗಿಯಾಗಿ ರಾಷ್ಟ್ರದ ಸ್ಥಿತಿಗತಿಯ ಕುರಿತು ತಿಳಿದುಕೊಳ್ಳಬೇಕು ಎಂದರು.

ರ‍್ಯಾಲಿಯಲ್ಲಿ ರಾಹುಲ್ ಗಾಂಧಿಯವರು ಮತ ಕಳ್ಳತನದ ಕುರಿತಾಗಿ ಗಂಭೀರ ಚರ್ಚೆ ನಡೆಸಲಿದ್ದಾರೆ. ಮತ ಕಳ್ಳತನದ ಕುರಿತಾಗಿ ದಾಖಲೆಯ ಸಮೇತ ಸತ್ಯ ಬಿಚ್ಚಿಡಲಿದ್ದಾರೆ. ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಚುನಾವಣಾ ಆಯೋಗ ಅದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆಯೂ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದೇವೆ. ಆಗ ಯಾರು ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ. ನಮ್ಮವರು ಸ್ವಲ್ಪ ಊದಾಸಿನಿನ ತೋರಿದ್ದರು, ಚುನಾವಣಾ ಆಯೋಗದಿಂದ ಆಕ್ರಮ ನಡೆಯಲ್ಲ ಎಂಬ ನಂಬಿಕೆ ಇತ್ತು ಆದರೆ ಈಗ ಚುನಾವಣೆಯಲ್ಲಿ ಅಕ್ರವಾಗಿದೆ ಎಂದು ಕಂಡು ಬಂದಿದೆ.

ಚುನಾವಣಾ ಆಯೋಗವನ್ನು ಬಳಸಿಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಪ್ರಜಾಪ್ರಭುತ್ವ ಉಳಿಯಬೇಕು ಎಂದರೆ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದಾಗಿದೆ. ಇ ವಿ ಎಂ ಯಂತ್ರದ ಅನುಮಾನವೇ ಬೇರೆ ಮತಪಟ್ಟಿ ಅಕ್ರಮವೇ ಬೇರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪೂರ್ಣಪ್ರಮಾಣದ ಆತ್ಮಹತ್ಯೆಯನ್ನು ನಿಲ್ಲಿಸಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿಯೇ ನಾವು ಐದು ಗ್ಯಾರಂಟಿಯನ್ನು‌ ಕೊಟ್ಟಿದ್ದೇವೆ‌. ಇಷ್ಟೇಲ್ಲಾ ಆದರೂ ಆತ್ಮಹತ್ಯೆ ಪ್ರಕರಣಗಳು ಮುಂದುವರೆಯುತ್ತಿವೆ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಆಗುತ್ತಿವೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ ಈ ಕುರಿತು ಪೊಲೀಸರಿಂದ ಒಂದು ತಂಡ ರಚಿಸಿ ತನಿಖೆ ಮಾಡಿಸಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ಖಾಸಗಿ ಸಂಸ್ಥೆಯಿಂದ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಸ್ತುತ ರೈತ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆ ಆಗಿದೆ ಆದರೆ ಕಡಿಮೆ ಆಗಿರೋದು ಖುಷಿ ತಂದಿಲ್ಲ ರೈತ ಆತ್ಮಹತ್ಯೆ ಸಂಪೂರ್ಣ ನಿಲ್ಲಬೇಕು ಎಂದರು.

ರಾಜ್ಯ ಸರ್ಕಾರಕ್ಕೆ ರಸಗೊಬ್ಬರ ಕಳುಹಿಸುವುದು ಕೇಂದ್ರ ಸರ್ಕಾರ ರಸಗೊಬ್ಬರ ತಯಾರಿಕೆ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕರಾದ ಆರ್.ಅಕೋಶ್ ರವರಿಗೆ ಇದರ ಕುರಿತಾಗಿ ಸಾಮಾನ್ಯ ಜ್ಞಾನ ಇಲ್ಲ. ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ನೀಡಬೇಕಿದ್ದ 1.25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರವನ್ನು ಕೇಂದ್ರ ನೀಡಿಲ್ಲ ಇದರಿಂದ ಸಣ್ಣ ಪ್ರಮಾಣದಲ್ಲಿ ರಸಗೊಬ್ಬರ ವಿತರಣೆಯಲ್ಲಿ ವಿಳಂಬವಾಗಿದೆ ಅಷ್ಟೇ ಎಂದರು.

ಸುದ್ದಿಗೋಷ್ಠಿಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ ಬಂಡಿ ಸಿದ್ದೇಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಕಂಪನಿ ಅಧ್ಯಕ್ಷ ಸಿ.ಡಿ. ಗಂಗಾಧರ್, ಜಿಲ್ಲಾ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶುಭ ದಾಯಿನಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಿದಂಬರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

8 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

9 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

9 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

9 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

10 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

10 hours ago