ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಜುಲೈ 31 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ಹೊರಹರಿವು (Out flow) ನೀರನ್ನು ಬಿಡಲಾಗಿದೆ.
ಈ ಪ್ರಮಾಣವೂ ಸುಮಾರು 2,00,000 ಕ್ಯೂಸೆಕ್ಸ್ ಗಿಂತ ಅಧಿಕವಾಗುವ ಸಂಭವವಿರುತ್ತದೆ ಆದ್ದರಿಂದ ಮಂಡ್ಯ, ಮೈಸೂರು, ಮತ್ತು ಚಾಮರಾಜನಗರ ಜಿಲ್ಲೆಯ ಜನರು ಹಾಗೂ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಮುಂಜಾಗ್ರತೆ ಕ್ರಮ ವಹಿಸಿಲು ಜಿಲ್ಲಾಡಳಿತ ಮನವಿ ಮಾಡಿದೆ.
ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಮತ್ತು ಸಂಬಂಧಪಟ್ಟ ಜಿಲ್ಲಾಡಳಿತದ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವಂತೆ ಈ ಮೂಲಕ ಕೋರಲಾಗಿದೆ.
ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇದಿಸುವುದು. ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಿರಲು ಸೂಚಿಸಿದೆ.
ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಆಯಾ ತಾಲ್ಲೂಕು ಆಡಳಿತದ ವತಿಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಂಡಿರುವ ವ್ಯಾಪಕ ಪ್ರಚಾರಗಳನ್ನು ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಗಮನಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…