ಮಂಡ್ಯ

ಕನ್ನಡ ಸಾಹಿತ್ಯದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ: ನಿರ್ಮಲಾನಂದ ಸ್ವಾಮೀಜಿ

ಮಂಡ್ಯ: ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದರು.

ಅವರು ಇಂದು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಸಭೆಯಲ್ಲಿ ಮಾತನಾಡಿದರು.

ಇದುವರೆಗೂ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಹಲವಾರು ಸಭೆ, ಕಾರ್ಯಕ್ರಮಗಳು ನಡೆದು ಪೂರ್ಣ ಸಿದ್ಧತೆಯ ಬಗ್ಗೆ ಚರ್ಚಿಸಲಾಗಿದೆ. ಇಂದಿನ ಸಭೆಯಲ್ಲಿ ಸಮ್ಮೇಳನಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ವಿಚಾರಗಳನ್ನು ಚರ್ಚಿಸಿ ಎಲ್ಲರೂ ಒಳ್ಳೆಯ ಸಲಹೆಗಳನ್ನು ನೀಡಿದ್ದೀರ ಎಂದರು.

ಕನ್ನಡ ಭಾಷೆಯನ್ನು ಅತ್ಯಂತ ಹೆಚ್ಚು ಮಾತನಾಡುವ ಜಿಲ್ಲೆ ಮಂಡ್ಯವಾಗಿದ್ದು, ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.

ಕೃಷಿ  ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಾತನಾಡಿ, ಸಭೆಯಲ್ಲಿ ನೀಡಿರುವ ಎಲ್ಲಾ ಸಲಹೆಗಳನ್ನು ಪರಿಗಣಿಸಿ ಅಳವಡಿಸಿಕೊಳ್ಳಲಾಗುವುದು. ಸಮ್ಮೇಳನಕ್ಕೆ ಇನ್ನೂ ಹೆಚ್ಚಿನ ಅನುದಾನಕ್ಕೆ ಬೇಡಿಕೆಯಿಟ್ಟಿದ್ದು ಹೆಚ್ಚಿನ ಅನುದಾನ ನೀಡಲು ಮುಂದಾಗಿ ಸಮ್ಮೇಳನದ ಸಕಲ ಸಿದ್ಧತೆಯನ್ನು ಮಾಡಲಾಗುವುದು. ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಯಾವುದೇ ವಿಷಯಗಳು ಕಂಡು ಬಂದಲ್ಲಿ ಕೂಡಲೇ ನಮ್ಮ ಗಮನಕ್ಕೆ ತನ್ನಿ. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿ ಮಾಡೋಣ ಎಂದರು.

ವಿಶೇಷ ಬಸ್ ವ್ಯವಸ್ಥೆ:  ಸಮ್ಮೇಳನಕ್ಕೆ ಆಗಮಿಸಲು ಮೈಸೂರು, ಬೆಂಗಳೂರು ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರಿಗೆ ಪ್ರಯಾಣವು ಉಚಿತವಾಗಿದ್ದು, ಪುರುಷರು ಟಿಕೆಟ್ ಪಡೆದು ವಿಶೇಷ ಬಸ್ ನಲ್ಲಿ ಪ್ರಯಾಣಿಸಬಹುದು ಎಂದು ತಿಳಿಸಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಹಳ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಪ್ರತಿಯೊಬ್ಬರ ಸಹಕಾರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಅನಾವಶ್ಯಕ ಚರ್ಚೆಗೆ ಆಸ್ಪದ ನೀಡದೆ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಮಾತನಾಡಿ, ಸಮ್ಮೇಳನದ ಎಲ್ಲಾ ಕೆಲಸಗಳು ಕ್ರಿಯಾಯೋಜನೆಯ ಪ್ರಕಾರ ನಡೆಯುತ್ತಿದೆ. ಈ ಬಾರಿ ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿ ಅನೇಕ ವಿಷಯಗಳಲ್ಲಿ ವಿಶೇಷತೆಯಿದೆ. ಅವುಗಳನ್ನು ಸಮ್ಮೇಳನದಲ್ಲಿ ತಿಳಿಸುವ ದ್ವಾರಗಳನ್ನು ನಿರ್ಮಿಸಲು ಚಿಂತಿಸಲಾಗಿದೆ ಎಂದರು.

ಸಮ್ಮೇಳನಕ್ಕೆ ಒಟ್ಟು 18 ದೇಶಗಳಿಂದ ವಿದೇಶಿ ಕನ್ನಡಿಗರು ಆಗಮಿಸುತ್ತಿದ್ದು, ಅವರು ಈಗಾಗಲೇ ಟಿಕೆಟ್ ಬುಕ್ ಮಾಡಿರುವ ಬಗ್ಗೆ ಮಾಹಿತಿಯಿದೆ. ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕೆಂದು ತೀರ್ಮಾನಿಸಲಾಗಿದೆ. ಸಮ್ಮೇಳನದ ಪ್ರತಿಯೊಂದು ಕೆಲಸವು ಸುಸೂತ್ರವಾಗಿ ನಡೆಯುತ್ತಿದ್ದು, ಅತ್ಯಂತ ಯಶಸ್ವಿಯಾಗಿ ದಾಖಲೆಯನ್ನು ನಿರ್ಮಿಸುವ ರೀತಿಯಲ್ಲಿ ಕನ್ನಡಿಗರ ಹಬ್ಬವನ್ನು ಆಚರಿಸೋಣ ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ ಮಾದೇಗೌಡ, ವಿವೇಕಾನಂದ ಹಾಗೂ ವಿಧಾನಸಭಾ ಕ್ಷೇತ್ರದ ಶಾಸಕರುಗಳಾದ ಪಿ ರವಿಕುಮಾರ್, ಎಬಿ ರಮೇಶ ಬಂಡಿಸಿದ್ದೇಗೌಡ, ಪಿಎಂ ನರೇಂದ್ರಸ್ವಾಮಿ, ಹೆಚ್. ಟಿ ಮಂಜು, ಕೆ ಎಂ ಉದಯ, ಮಾಜಿ ಸಂಸದೆ ಸುಮಲತಾ ಅಂಬರೀಶ್, ಮಾಜಿ ವಿಧಾನ ಪರಿಷತ್ ಶಾಸಕ‌ ಮರಿತೀಬ್ಬೆಗೌಡ, ಮಾಜಿ ಶಾಸಕ ಕೆ ಅನ್ನದಾನಿ, ಶ್ರೀಕಂಠೇಗೌಡ, , ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಕಸಾಪ ಸಂಚಾಲಾಕಿ ಡಾ ಮೀರಾಶಿವಲಿಂಗಯ್ಯ, ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್, ಕ.ಸಾಪ ಕಾರ್ಯದರ್ಶಿ ಕೃಷ್ಣೆಗೌಡ, ಹರ್ಷ, ಅಪ್ಪಾಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago