ಮಂಡ್ಯ

ಎರಡು ಸಮುದಾಯಗಳು ಶಾಂತಿ, ಸೌಹರ್ದತೆ ಕಾಪಾಡಲಿ: ಎನ್‌. ಚಲುವರಾಯಸ್ವಾಮಿ

ಮಂಡ್ಯ: ನಾಗಮಂಗಲದ ವಿವಿಧ ಸಮುದಾಯದ ಯುವಶಕ್ತಿ ಸಮಿತಿ ರಚಿಸಿಕೊಂಡು ಶಾಂತಿ ಹಾಗೂ ಸೌಹರ್ದತೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ  ಅಭಿಪ್ರಾಯ ವ್ಯಕ್ತಪಡಿಸಿದರು.

ಶನಿವಾರ ನಾಗಮಂಗಲ ತಾಲ್ಲೂಕಿನ ಜಯಮ್ಮ ಕೃಷ್ಣಪ್ಪ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ವಿವಿಧ ಸಮುದಾಯದ ಯುವಜನರು ಸಮಿತಿ ರಚಿಸಿಕೊಂಡು ಧಾರ್ಮಿಕ ಕಾರ್ಯಕ್ರಮಗಳು ಮೆರವಣಿಗೆ ನಡೆದ ಸಂದರ್ಭದಲ್ಲಿ ಯಾವುದೇ ಬೀದಿಯಲ್ಲಿ ಸಾಗಿದರೂ ಯಾವುದೇ ಗಲಭೆಯಾಗದಂತೆ ಸೌಹರ್ದತೆ ಮೆರೆಯಬೇಕು. ತಾಲ್ಲೂಕು ಇತರರಿಗೆ ಮಾದರಿಯಾಗಬೇಕು ಎಂದರು.

ನಾಗಮಂಗಲದಲ್ಲಿ ಸೆ.11 ರಂದು ಗಣಪತಿ ಮೆರವಣಿಗೆಯ ಸಂದರ್ಭದಲ್ಲಿ ಉಂಟಾಗ ಗಲಾಟೆ ವೈಯಕ್ತಿಕವಾಗಿ ಅತೀವ ನೋವು ಉಂಟು ಮಾಡಿದೆ. ಘಟನೆ ನಡೆದುಹೋಗಿದೆ ಅದನ್ನು ಪುನ: ಸ್ಮರಿಸುತ್ತ ಅದರ ಸುತ್ತ ಸುತ್ತುವುದು ಬೇಡ ಅದರ ಬದಲಿಗೆ ಶಾಂತ ಚಿತ್ತದಿಂದ ಒಂದಾಗಿ ಎಲ್ಲರೂ ಮುಂದೆ ಸಾಗೋಣ ಎಂದು ಸಲಹೆ ನೀಡಿದರು.

ಗಲಭೆ ಪೂರ್ವನಿಯೋಜಿತ ಅಥವಾ ಅನಿರೀಕ್ಷತವೂ ಎಂಬುದು ತನಿಖೆಯಿಂದ ತಿಳಿದು ಬರಲಿದೆ. ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದೆ ಇದರ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ಸರ್ಕಾರದಿಂದ ಹಾಗೂ ವೈಯಕ್ತಿಕವಾಗಿಯೂ ಸಹ ಪರಿಹಾರ ಒದಗಿಸಿ ಜೀವನ ಕಟ್ಟಿಕೊಳ್ಳಲು ಸಹಕರಿಸಲಾಗುವುದು. ಇದಲ್ಲದೇ ತಾಲ್ಲೂಕಿಗೆ ಭೇಟಿ ನೀಡಿ ಅಂಗಡಿ ಮುಂಗಟ್ಟು ಹಾನಿಯದವರಿಗೆ ಕೆಲವರು ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ ಅವರಿಗೂ ಸಹ ಧನ್ಯವಾದಗಳು ಎಂದು ಹೇಳಿದರು.

ಸೋಮವಾರ ಈದ ಮಿಲಾದ್ ಹಬ್ಬವಿದ್ದು, ಅಂದು ಗಣೇಶ ವಿಸರ್ಜನೆ ಮೆರವಣಿಗೆ ಮಾಡುವುದು ಬೇಡ ಎಂದು ಸಚಿವರು ಮನವಿ ಮಾಡಿದರು.

ಗಲಭೆ ಸೃಷ್ಟಿಸಿದರಿಗೆ ಕಾನೂನು ರೀತಿ ಶಿಕ್ಷೆಯಾಗಲಿದೆ: ಡಿಸಿ ಕುಮಾರ

ಜಿಲ್ಲಾಧಿಕಾರಿ ಡಾ: ಕುಮಾರ  ಮಾತನಾಡಿ ಗಲಭೆ ಉಂಟುಮಾಡಿದವರಿಗೆ ಕಾನೂನು ರೀತಿ ಶಿಕ್ಷೆಯಾಗಲಿದೆ. ಆದರೆ ಈ ಸಣ್ಣ ಪ್ರಕರಣದಿಂದ 25 ಕ್ಕೂ ಹೆಚ್ಚು ಅಂಗಡಿ ಮುಂಗಟ್ಟಿಗೆ ಹಾನಿಯಾಗಿದೆ. ಇವರು ಜೀವನ ಕಟ್ಟಿಕಟ್ಟುಕೊಳ್ಳುವ ರೀತಿ ಹಾಗೂ ಮಾನಸಿಕ ಒತ್ತಡದ ಬಗ್ಗೆ ಚಿಂತಿಸಬೇಕಿದೆ ಎಂದರು.

ಮಾನವೀಯ ಮೌಲ್ಯ ಮತ್ತು ಹೃದಯ ಶ್ರೀಮಂತಿಕೆಯನ್ನು ಭಾವನೆ ಬೆಳೆದರೆ ಇಂತಹ ಘಟನೆಗಳು ಘಟಿಸುವುದಿಲ್ಲ. ಸಹಬಾಳ್ವೆ ಹಾಗೂ ಭಾವೈಕ್ಯತೆಯನ್ನು ಹೆಚ್ಚು ಬೆಳೆಸಿಕೊಳ್ಳಬೇಕು. ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗದಂತೆ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳಬೇಕು. ಸರ್ಕಾರದಿಂದ ನೀಡಲಾಗುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಹೇಳಿದರು.

ಯುವ ಸಮುದಾಯ ಹಾಗೂ ಜನರು ಯಾವುದೇ ವದಂತಿಗಳಿಗೆ ಕಿವಿಕೊಡಬಾರದು. ಅವುಗಳನ್ನು ನಂಬಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸಗಳಿಗೆ ಕೈ ಹಾಕಬಾರದು ಎಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

ನಾಗಮಂಗಲದಲ್ಲಿ ನಡೆದ ಗಲಭೆ ಆಕಸ್ಮಿಕ ಇದನ್ನು ಹತೋಟಿಗೆ ತಂದ ಪೊಲೀಸ್ ಇಲಾಖೆ ಧನ್ಯವಾದಗಳು. ಮೆರವಣಿಗೆ ಅಥವಾ ಯಾವುದೇ ಕಾರ್ಯಕ್ರಮ ನಡೆಯುವಾಗ ಬೇರೆಯವರನ್ನು ಪ್ರಚೋದಿಸಬಾರದು ಹಾಗೂ ಪ್ರಚೋದನೆಗೆ ಒಳಗಾಗಬಾರದು. ಆಗ ಯಾವುದೇ ಗಲಾಟೆ ನಡೆಯುವುದಿಲ್ಲ. ಗೌರಿ, ಗಣೇಶ, ಈದ್ ಮಿಲಾದ್ ಯಾವುದೇ ಹಬ್ಬವಾಗಲಿ ಎಲ್ಲರೂ ಸೇರಿ ಆಚರಿಸೋಣ ಎಲ್ಲಾ ಜನಾಂಗದ ಹಿರಿಯರು ಸೇರಿ ಸಮಿತಿ ರಚಿಸಿಕೊಂಡು ಮಾರ್ಗಸೂಚಿಗಳನ್ನು ರಚಿಸಿಕೊಂಡು ಸಂತೋಷದಿಂದ ಹಬ್ಬಗಳನ್ನು ಆಚರಿಸೋಣ ಎಂದು ಸಲಹೆ ನೀಡಿದರು.

ಗಣಪತಿ ಹಬ್ಬದಲ್ಲಿ 3, 5 ಹಾಗೂ 9 ದಿನಗಳಲ್ಲಿ ವಿಸರ್ಜನೆ ಮಾಡುವುದು ವಾಡಿಕೆ. ಇದಕ್ಕೆ ರೂಟ್ ಮ್ಯಾಪ್ ಮೊದಲೇ ಸಿದ್ಧಪಡಿಸಿಕೊಂಡು ಪೊಲೀಸ್ ಇಲಾಖೆ ಅನುಮತಿ ಪಡೆದುಕೊಳ್ಳಬೇಕು. ಇಲಾಖೆಗಳು ಮಾರ್ಗಸೂಚಿ ಹೊರಡಿಸಿ ಹೆಚ್ಚು ಪ್ರಚಾರ ಕೈಗೊಳ್ಳಬೇಕು.ಇಂತಹ ಅಹಿತಕರ‌ ಘಟನೆ ಕಿಡಿಗೇಡಿಗಳಿಂದ ನಡೆಯುತ್ತದೆ.ಕಿಡಿಗೇಡಿಗಳು ಒಂದು ಜನಾಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ಮನೆಯಲ್ಲಿ‌ ಪೋಷಕರು ಮಕ್ಕಳಿಗೆ ಚಿಕ್ಕಂದಿನಿಂದಲೇ ನೈತಿಕ ಶಿಕ್ಷಣವನ್ನು‌ ನೀಡಿ ಎಲ್ಲರನ್ನೂ ಸತ್ಪ್ರಜೆಯನ್ನಾಗಿ ಮಾಡುವಂತೆ ಸಲಹೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago