ಮಂಡ್ಯ

ಬಸವಣ್ಣ ಕೊಟ್ಟಿದ್ದು ಮಾನವೀಯ ಧರ್ಮ: ಸಚಿವ ಎಂ.ಬಿ.ಪಾಟೀಲ್‌

ಮಂಡ್ಯ: ಬಸವಣ್ಣನವರು 12ನೇ ಶತಮಾನದಲ್ಲೇ ಮಾನವೀಯತೆಯನ್ನು ಆಧರಿಸಿದ ಧರ್ಮ ಮತ್ತು ಸಿದ್ಧಾಂತವನ್ನು ಸ್ಥಾಪಿಸಿದ ಮಹಾಪುರುಷರಾಗಿದ್ದಾರೆ. ಅವರು ಜಾತ್ಯಾತೀತ ಮತ್ತು ಸಮಾನತೆಯನ್ನು ಮುನ್ನೆಲೆಗೆ ತಂದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕ ಮತ್ತು ಬಸವ ಸಮಿತಿಯ ಘಟಕಗಳ ವತಿಯಿಂದ ಇಂದು 892ನೇ ಬಸವ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಲಿಂಗಾಯತರ ಜನಸಂಖ್ಯೆ ಶೇಕಡಾ 17ರಷ್ಟಿದೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೂಡ 20 ಲಕ್ಷ ಲಿಂಗಾಯತರಿದ್ದಾರೆ. ನಮ್ಮ ಮಠಗಳು ಜಾತಿಯ ತಾರತಮ್ಯ ಮಾಡದೆ ಎಲ್ಲರಿಗೂ ಆಶ್ರಯ ನೀಡಿವೆ. ಈಗ ನಮ್ಮಲ್ಲೇ ಇರುವ ಉಪಪಂಗಡಗಳ ವ್ಯತ್ಯಾಸಗಳನ್ನು ಮರೆತು ಸಂಘಟನೆ ಮಾಡಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಬಸವಣ್ಣನವರು ಕಾಯಕಕ್ಕೆ ಮಹತ್ವ ನೀಡಿ, ದಮನಿತ ಸಮುದಾಯಗಳನ್ನು ಲಿಂಗಾಯತ ಧರ್ಮಕ್ಕೆ ಸೇರಿಸಿಕೊಂಡರು. ನಾವು ಬಸವಣ್ಣನವರ ತತ್ವವನ್ನು ಸರಿಯಾಗಿ ಅನುಸರಿಸಿದ್ದರೆ ರಾಜ್ಯದ ಅರ್ಧ ಭಾಗದಲ್ಲಿ ಲಿಂಗಾಯತರೇ ಇರುತ್ತಿದ್ದರು ಎಂದು ಅವರು ಪ್ರತಿಪಾದಿಸಿದರು.

ಬಸವಣ್ಣ ಸಂಸ್ಕೃತದ ಪಾರಮ್ಯವನ್ನು ಮರೆತು, ವಚನಗಳ ಮೂಲಕ ದೇವರ ಜತೆ ಕನ್ನಡದಲ್ಲಿ ಮಾತನಾಡಲು ಆರಂಭಿಸಿದರು. ಈಗಲೂ ಬಸವ ಸಂದೇಶವು ಜಾಗತಿಕ ಮಟ್ಟದಲ್ಲಿ ಪ್ರಸಾರ ಆಗಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮಿಗಳು, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಶಾಸಕ ರವಿಕುಮಾರ್ ಗಣಿಗ, ಮಾಜಿ ಸಚಿವ ಸಿ ಎಸ್ ಪುಟ್ಟರಾಜು, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ, ರುದ್ರೇಶ್, ಸಚ್ಚಿದಾನಂದ, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಇಂದಿರೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

5 mins ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

52 mins ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

3 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

6 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

6 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

6 hours ago