ಮಂಡ್ಯ

ಬಸವಣ್ಣ ಕೊಟ್ಟಿದ್ದು ಮಾನವೀಯ ಧರ್ಮ: ಸಚಿವ ಎಂ.ಬಿ.ಪಾಟೀಲ್‌

ಮಂಡ್ಯ: ಬಸವಣ್ಣನವರು 12ನೇ ಶತಮಾನದಲ್ಲೇ ಮಾನವೀಯತೆಯನ್ನು ಆಧರಿಸಿದ ಧರ್ಮ ಮತ್ತು ಸಿದ್ಧಾಂತವನ್ನು ಸ್ಥಾಪಿಸಿದ ಮಹಾಪುರುಷರಾಗಿದ್ದಾರೆ. ಅವರು ಜಾತ್ಯಾತೀತ ಮತ್ತು ಸಮಾನತೆಯನ್ನು ಮುನ್ನೆಲೆಗೆ ತಂದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕ ಮತ್ತು ಬಸವ ಸಮಿತಿಯ ಘಟಕಗಳ ವತಿಯಿಂದ ಇಂದು 892ನೇ ಬಸವ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಲಿಂಗಾಯತರ ಜನಸಂಖ್ಯೆ ಶೇಕಡಾ 17ರಷ್ಟಿದೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೂಡ 20 ಲಕ್ಷ ಲಿಂಗಾಯತರಿದ್ದಾರೆ. ನಮ್ಮ ಮಠಗಳು ಜಾತಿಯ ತಾರತಮ್ಯ ಮಾಡದೆ ಎಲ್ಲರಿಗೂ ಆಶ್ರಯ ನೀಡಿವೆ. ಈಗ ನಮ್ಮಲ್ಲೇ ಇರುವ ಉಪಪಂಗಡಗಳ ವ್ಯತ್ಯಾಸಗಳನ್ನು ಮರೆತು ಸಂಘಟನೆ ಮಾಡಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಬಸವಣ್ಣನವರು ಕಾಯಕಕ್ಕೆ ಮಹತ್ವ ನೀಡಿ, ದಮನಿತ ಸಮುದಾಯಗಳನ್ನು ಲಿಂಗಾಯತ ಧರ್ಮಕ್ಕೆ ಸೇರಿಸಿಕೊಂಡರು. ನಾವು ಬಸವಣ್ಣನವರ ತತ್ವವನ್ನು ಸರಿಯಾಗಿ ಅನುಸರಿಸಿದ್ದರೆ ರಾಜ್ಯದ ಅರ್ಧ ಭಾಗದಲ್ಲಿ ಲಿಂಗಾಯತರೇ ಇರುತ್ತಿದ್ದರು ಎಂದು ಅವರು ಪ್ರತಿಪಾದಿಸಿದರು.

ಬಸವಣ್ಣ ಸಂಸ್ಕೃತದ ಪಾರಮ್ಯವನ್ನು ಮರೆತು, ವಚನಗಳ ಮೂಲಕ ದೇವರ ಜತೆ ಕನ್ನಡದಲ್ಲಿ ಮಾತನಾಡಲು ಆರಂಭಿಸಿದರು. ಈಗಲೂ ಬಸವ ಸಂದೇಶವು ಜಾಗತಿಕ ಮಟ್ಟದಲ್ಲಿ ಪ್ರಸಾರ ಆಗಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮಿಗಳು, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಶಾಸಕ ರವಿಕುಮಾರ್ ಗಣಿಗ, ಮಾಜಿ ಸಚಿವ ಸಿ ಎಸ್ ಪುಟ್ಟರಾಜು, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ, ರುದ್ರೇಶ್, ಸಚ್ಚಿದಾನಂದ, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಇಂದಿರೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago