MCA MBA postgraduate courses start at Mandya University
ಮೈಸೂರು ವಿ.ವಿ ಪರಿನಿಯಮಾವಳಿಯಂತೆ ಪ್ರಾರಂಭ
ಮಂಡ್ಯ : ಮಂಡ್ಯ ವಿಶ್ವವಿದ್ಯಾಲಯದಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನಿಂದ ತಾಂತ್ರಿಕ ಹಾಗೂ ನಿರ್ವಹಣಾ ಶಾಸ್ತ್ರಗಳಿಗೆ ಸಂಬಂಧಿಸಿದಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ)ಯಿಂದ ಅನುಮೋದನೆ ಪಡೆದು ಎಂ.ಸಿ.ಎ. ಮತ್ತು ಎಂ.ಬಿ.ಎ. ಸ್ನಾತಕೋತ್ತರ ಪದವಿ ಆರಂಭಿಸಲಾಗುತ್ತಿದೆ ಎಂದು ವಿವಿಯ ಉಪ ಕುಲಪತಿ ಪ್ರೊ. ಶಿವಚಿತ್ತಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ವಿವಿಯು ಯಾವುದೇ ಪದವಿಯನ್ನು ಸ್ವತಃ ಪ್ರಾರಂಭಿಸಬಹುದಾಗಿದ್ದು, ಎಐಸಿಟಿಇ (ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್) ಅನುಮೋದನೆಯೊಂದಿಗೆ ಮೈಸೂರು ವಿವಿಯ ಪರಿನಿಯಮಾವಳಿಯಂತೆ ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಯ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ಮುಂದಾಗಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜೂ.೨೯ರಂದು ಎಂ.ಸಿ.ಎ. ಮತ್ತು ಎಂ.ಬಿ.ಎ. ಪದವಿಗಳ ಆರಂಭಕ್ಕೆ ಅನುಮೋದನೆ ದೊರೆತಿದ್ದು, ಬಿಎಸ್ಸಿ ಕಂಪ್ಯೂಟರ್ ಸೈನ್ಸ್, ಎಂಎಸ್ಸಿ ಮಾಡಿದವರು ಎಂಸಿಎ ಪದವಿಯ ಪ್ರವೇಶ ಪಡೆಯಬಹುದಾಗಿದೆ. ಬಿ.ಕಾಂ, ಬಿ.ಬಿ.ಎ. ಸೇರಿದಂತೆ ಯಾವುದೇ ಪದವಿ ಪಡೆದವರು ಎಂ.ಬಿ.ಎ. ಪದವಿಗೆ ಪ್ರವೇಶಾತಿ ಪಡೆಯಬಹುದಾಗಿದೆ ಎಂದು ಹೇಳಿದರು.
ಎಂ.ಬಿ.ಎ. ಪದವಿ ಪಡೆಯಲು ರಾಜ್ಯದವರಿಗೆ ೭೫ ಸಾವಿರ ರೂ., ಹೊರ ರಾಜ್ಯದವರಿಗೆ ೧,೧೨,೦೦೦ ರೂ. ಶುಲ್ಕವಿದ್ದು, ಎಂ.ಸಿ.ಎ. ಪದವಿಗೆ ರಾಜ್ಯದವರಿಗೆ ೪೯,೫೧೨ ರೂ. ಹಾಗೂ ಹೊರ ರಾಜ್ಯದವರಿಗೆ ೭೫,೯೩೦ ರೂ. ಶುಲ್ಕವಿದೆ. ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ೨೩,೬೭೮ ರೂ. ವಿನಾಯಿತಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ.ಯೋಗನರಸಿಂಹಾಚಾರಿ, ಸಿಂಡಿಕೇಟ್ ನಾಮನಿರ್ದೇಶಿತ ಸದಸ್ಯ ನಾಗರಾಜ್, ಸಿಂಡಿಕೇಟ್ ಸದಸ್ಯ ಡಾ. ಎಸ್.ಎಲ್.ಸುರೇಶ್, ಬೋಧಕರಾದ ಪ್ರೊ.ದಿಲ್ಷಾದ್ ಬೇಗಂ, ಡಾ.ಪ್ರೇಮ್ಸಿಂಗ್, ಉದ್ಯೋಗ ಸಂಯೋಜಕ ಎಂ.ಸಿ.ಗಿರೀಶ್ ಹಾಜರಿದ್ದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…