ಮಂಡ್ಯ

ಮಂಡ್ಯ ವಿ.ವಿಯಲ್ಲಿ ಎಂಸಿಎ, ಎಂಬಿಎ ಸ್ನಾತಕೋತ್ತರ ಪದವಿ ಆರಂಭ : ಉಪ ಕುಲಪತಿ ಪ್ರೊ. ಶಿವಚಿತ್ತಪ್ಪ

ಮೈಸೂರು ವಿ.ವಿ ಪರಿನಿಯಮಾವಳಿಯಂತೆ ಪ್ರಾರಂಭ

ಮಂಡ್ಯ : ಮಂಡ್ಯ ವಿಶ್ವವಿದ್ಯಾಲಯದಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನಿಂದ ತಾಂತ್ರಿಕ ಹಾಗೂ ನಿರ್ವಹಣಾ ಶಾಸ್ತ್ರಗಳಿಗೆ ಸಂಬಂಧಿಸಿದಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ)ಯಿಂದ ಅನುಮೋದನೆ ಪಡೆದು ಎಂ.ಸಿ.ಎ. ಮತ್ತು ಎಂ.ಬಿ.ಎ. ಸ್ನಾತಕೋತ್ತರ ಪದವಿ ಆರಂಭಿಸಲಾಗುತ್ತಿದೆ ಎಂದು ವಿವಿಯ ಉಪ ಕುಲಪತಿ ಪ್ರೊ. ಶಿವಚಿತ್ತಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ವಿವಿಯು ಯಾವುದೇ ಪದವಿಯನ್ನು ಸ್ವತಃ ಪ್ರಾರಂಭಿಸಬಹುದಾಗಿದ್ದು, ಎಐಸಿಟಿಇ (ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್) ಅನುಮೋದನೆಯೊಂದಿಗೆ ಮೈಸೂರು ವಿವಿಯ ಪರಿನಿಯಮಾವಳಿಯಂತೆ ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಯ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ಮುಂದಾಗಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜೂ.೨೯ರಂದು ಎಂ.ಸಿ.ಎ. ಮತ್ತು ಎಂ.ಬಿ.ಎ. ಪದವಿಗಳ ಆರಂಭಕ್ಕೆ ಅನುಮೋದನೆ ದೊರೆತಿದ್ದು, ಬಿಎಸ್ಸಿ ಕಂಪ್ಯೂಟರ್ ಸೈನ್ಸ್, ಎಂಎಸ್ಸಿ ಮಾಡಿದವರು ಎಂಸಿಎ ಪದವಿಯ ಪ್ರವೇಶ ಪಡೆಯಬಹುದಾಗಿದೆ. ಬಿ.ಕಾಂ, ಬಿ.ಬಿ.ಎ. ಸೇರಿದಂತೆ ಯಾವುದೇ ಪದವಿ ಪಡೆದವರು ಎಂ.ಬಿ.ಎ. ಪದವಿಗೆ ಪ್ರವೇಶಾತಿ ಪಡೆಯಬಹುದಾಗಿದೆ ಎಂದು ಹೇಳಿದರು.

ಎಂ.ಬಿ.ಎ. ಪದವಿ ಪಡೆಯಲು ರಾಜ್ಯದವರಿಗೆ ೭೫ ಸಾವಿರ ರೂ., ಹೊರ ರಾಜ್ಯದವರಿಗೆ ೧,೧೨,೦೦೦ ರೂ. ಶುಲ್ಕವಿದ್ದು, ಎಂ.ಸಿ.ಎ. ಪದವಿಗೆ ರಾಜ್ಯದವರಿಗೆ ೪೯,೫೧೨ ರೂ. ಹಾಗೂ ಹೊರ ರಾಜ್ಯದವರಿಗೆ ೭೫,೯೩೦ ರೂ. ಶುಲ್ಕವಿದೆ. ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ೨೩,೬೭೮ ರೂ. ವಿನಾಯಿತಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ.ಯೋಗನರಸಿಂಹಾಚಾರಿ, ಸಿಂಡಿಕೇಟ್ ನಾಮನಿರ್ದೇಶಿತ ಸದಸ್ಯ ನಾಗರಾಜ್, ಸಿಂಡಿಕೇಟ್ ಸದಸ್ಯ ಡಾ. ಎಸ್.ಎಲ್.ಸುರೇಶ್, ಬೋಧಕರಾದ ಪ್ರೊ.ದಿಲ್ಷಾದ್ ಬೇಗಂ, ಡಾ.ಪ್ರೇಮ್‌ಸಿಂಗ್, ಉದ್ಯೋಗ ಸಂಯೋಜಕ ಎಂ.ಸಿ.ಗಿರೀಶ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

5 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

7 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

8 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

8 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

8 hours ago