ಮಂಡ್ಯ

ಮಂಡ್ಯ ವಿ.ವಿಯಲ್ಲಿ ಎಂಸಿಎ, ಎಂಬಿಎ ಸ್ನಾತಕೋತ್ತರ ಪದವಿ ಆರಂಭ : ಉಪ ಕುಲಪತಿ ಪ್ರೊ. ಶಿವಚಿತ್ತಪ್ಪ

ಮೈಸೂರು ವಿ.ವಿ ಪರಿನಿಯಮಾವಳಿಯಂತೆ ಪ್ರಾರಂಭ

ಮಂಡ್ಯ : ಮಂಡ್ಯ ವಿಶ್ವವಿದ್ಯಾಲಯದಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನಿಂದ ತಾಂತ್ರಿಕ ಹಾಗೂ ನಿರ್ವಹಣಾ ಶಾಸ್ತ್ರಗಳಿಗೆ ಸಂಬಂಧಿಸಿದಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ)ಯಿಂದ ಅನುಮೋದನೆ ಪಡೆದು ಎಂ.ಸಿ.ಎ. ಮತ್ತು ಎಂ.ಬಿ.ಎ. ಸ್ನಾತಕೋತ್ತರ ಪದವಿ ಆರಂಭಿಸಲಾಗುತ್ತಿದೆ ಎಂದು ವಿವಿಯ ಉಪ ಕುಲಪತಿ ಪ್ರೊ. ಶಿವಚಿತ್ತಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ವಿವಿಯು ಯಾವುದೇ ಪದವಿಯನ್ನು ಸ್ವತಃ ಪ್ರಾರಂಭಿಸಬಹುದಾಗಿದ್ದು, ಎಐಸಿಟಿಇ (ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್) ಅನುಮೋದನೆಯೊಂದಿಗೆ ಮೈಸೂರು ವಿವಿಯ ಪರಿನಿಯಮಾವಳಿಯಂತೆ ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಯ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ಮುಂದಾಗಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜೂ.೨೯ರಂದು ಎಂ.ಸಿ.ಎ. ಮತ್ತು ಎಂ.ಬಿ.ಎ. ಪದವಿಗಳ ಆರಂಭಕ್ಕೆ ಅನುಮೋದನೆ ದೊರೆತಿದ್ದು, ಬಿಎಸ್ಸಿ ಕಂಪ್ಯೂಟರ್ ಸೈನ್ಸ್, ಎಂಎಸ್ಸಿ ಮಾಡಿದವರು ಎಂಸಿಎ ಪದವಿಯ ಪ್ರವೇಶ ಪಡೆಯಬಹುದಾಗಿದೆ. ಬಿ.ಕಾಂ, ಬಿ.ಬಿ.ಎ. ಸೇರಿದಂತೆ ಯಾವುದೇ ಪದವಿ ಪಡೆದವರು ಎಂ.ಬಿ.ಎ. ಪದವಿಗೆ ಪ್ರವೇಶಾತಿ ಪಡೆಯಬಹುದಾಗಿದೆ ಎಂದು ಹೇಳಿದರು.

ಎಂ.ಬಿ.ಎ. ಪದವಿ ಪಡೆಯಲು ರಾಜ್ಯದವರಿಗೆ ೭೫ ಸಾವಿರ ರೂ., ಹೊರ ರಾಜ್ಯದವರಿಗೆ ೧,೧೨,೦೦೦ ರೂ. ಶುಲ್ಕವಿದ್ದು, ಎಂ.ಸಿ.ಎ. ಪದವಿಗೆ ರಾಜ್ಯದವರಿಗೆ ೪೯,೫೧೨ ರೂ. ಹಾಗೂ ಹೊರ ರಾಜ್ಯದವರಿಗೆ ೭೫,೯೩೦ ರೂ. ಶುಲ್ಕವಿದೆ. ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ೨೩,೬೭೮ ರೂ. ವಿನಾಯಿತಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ.ಯೋಗನರಸಿಂಹಾಚಾರಿ, ಸಿಂಡಿಕೇಟ್ ನಾಮನಿರ್ದೇಶಿತ ಸದಸ್ಯ ನಾಗರಾಜ್, ಸಿಂಡಿಕೇಟ್ ಸದಸ್ಯ ಡಾ. ಎಸ್.ಎಲ್.ಸುರೇಶ್, ಬೋಧಕರಾದ ಪ್ರೊ.ದಿಲ್ಷಾದ್ ಬೇಗಂ, ಡಾ.ಪ್ರೇಮ್‌ಸಿಂಗ್, ಉದ್ಯೋಗ ಸಂಯೋಜಕ ಎಂ.ಸಿ.ಗಿರೀಶ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

7 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

7 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

7 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

7 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

7 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

7 hours ago