ಮಂಡ್ಯ

ಮಂಡ್ಯ ವಿ.ವಿಯಲ್ಲಿ ಎಂಸಿಎ, ಎಂಬಿಎ ಸ್ನಾತಕೋತ್ತರ ಪದವಿ ಆರಂಭ : ಉಪ ಕುಲಪತಿ ಪ್ರೊ. ಶಿವಚಿತ್ತಪ್ಪ

ಮೈಸೂರು ವಿ.ವಿ ಪರಿನಿಯಮಾವಳಿಯಂತೆ ಪ್ರಾರಂಭ

ಮಂಡ್ಯ : ಮಂಡ್ಯ ವಿಶ್ವವಿದ್ಯಾಲಯದಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನಿಂದ ತಾಂತ್ರಿಕ ಹಾಗೂ ನಿರ್ವಹಣಾ ಶಾಸ್ತ್ರಗಳಿಗೆ ಸಂಬಂಧಿಸಿದಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ)ಯಿಂದ ಅನುಮೋದನೆ ಪಡೆದು ಎಂ.ಸಿ.ಎ. ಮತ್ತು ಎಂ.ಬಿ.ಎ. ಸ್ನಾತಕೋತ್ತರ ಪದವಿ ಆರಂಭಿಸಲಾಗುತ್ತಿದೆ ಎಂದು ವಿವಿಯ ಉಪ ಕುಲಪತಿ ಪ್ರೊ. ಶಿವಚಿತ್ತಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ವಿವಿಯು ಯಾವುದೇ ಪದವಿಯನ್ನು ಸ್ವತಃ ಪ್ರಾರಂಭಿಸಬಹುದಾಗಿದ್ದು, ಎಐಸಿಟಿಇ (ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್) ಅನುಮೋದನೆಯೊಂದಿಗೆ ಮೈಸೂರು ವಿವಿಯ ಪರಿನಿಯಮಾವಳಿಯಂತೆ ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಯ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ಮುಂದಾಗಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜೂ.೨೯ರಂದು ಎಂ.ಸಿ.ಎ. ಮತ್ತು ಎಂ.ಬಿ.ಎ. ಪದವಿಗಳ ಆರಂಭಕ್ಕೆ ಅನುಮೋದನೆ ದೊರೆತಿದ್ದು, ಬಿಎಸ್ಸಿ ಕಂಪ್ಯೂಟರ್ ಸೈನ್ಸ್, ಎಂಎಸ್ಸಿ ಮಾಡಿದವರು ಎಂಸಿಎ ಪದವಿಯ ಪ್ರವೇಶ ಪಡೆಯಬಹುದಾಗಿದೆ. ಬಿ.ಕಾಂ, ಬಿ.ಬಿ.ಎ. ಸೇರಿದಂತೆ ಯಾವುದೇ ಪದವಿ ಪಡೆದವರು ಎಂ.ಬಿ.ಎ. ಪದವಿಗೆ ಪ್ರವೇಶಾತಿ ಪಡೆಯಬಹುದಾಗಿದೆ ಎಂದು ಹೇಳಿದರು.

ಎಂ.ಬಿ.ಎ. ಪದವಿ ಪಡೆಯಲು ರಾಜ್ಯದವರಿಗೆ ೭೫ ಸಾವಿರ ರೂ., ಹೊರ ರಾಜ್ಯದವರಿಗೆ ೧,೧೨,೦೦೦ ರೂ. ಶುಲ್ಕವಿದ್ದು, ಎಂ.ಸಿ.ಎ. ಪದವಿಗೆ ರಾಜ್ಯದವರಿಗೆ ೪೯,೫೧೨ ರೂ. ಹಾಗೂ ಹೊರ ರಾಜ್ಯದವರಿಗೆ ೭೫,೯೩೦ ರೂ. ಶುಲ್ಕವಿದೆ. ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ೨೩,೬೭೮ ರೂ. ವಿನಾಯಿತಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ.ಯೋಗನರಸಿಂಹಾಚಾರಿ, ಸಿಂಡಿಕೇಟ್ ನಾಮನಿರ್ದೇಶಿತ ಸದಸ್ಯ ನಾಗರಾಜ್, ಸಿಂಡಿಕೇಟ್ ಸದಸ್ಯ ಡಾ. ಎಸ್.ಎಲ್.ಸುರೇಶ್, ಬೋಧಕರಾದ ಪ್ರೊ.ದಿಲ್ಷಾದ್ ಬೇಗಂ, ಡಾ.ಪ್ರೇಮ್‌ಸಿಂಗ್, ಉದ್ಯೋಗ ಸಂಯೋಜಕ ಎಂ.ಸಿ.ಗಿರೀಶ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

2 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago