kumaraswamy and devegowda
ಮಂಡ್ಯ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನವರು ಎಲ್ಲವನ್ನು ಬಿಟ್ಟು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ನವರು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ. ತಮಿಳುನಾಡಿನವರು ಹಾಗೂ ಕಾಂಗ್ರೆಸ್ನವರು ಪಾಟ್ನರ್ಗಳು. ಅವರ ಒಪ್ಪಿಗೆ ತಗೊಂಡು ಬನ್ನಿ, ಬಳಿಕ ಮೇಕೆದಾಟು ಮಾಡಿಸೋಣಾ. ಮೇಕೆದಾಟು ಯೋಜನೆ ಆಗಬೇಕು ಅಂದರೆ ದೇವೇಗೌಡರ ಕುಟುಂಬದಿಂದಲೇ ಆಗಬೇಕು. ಇವರ ಯಾರ ಕೈಯಲ್ಲೂ ಆಗಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.
ಇನ್ನು ಮೈಶುಗರ್ ಶಾಲೆಯನ್ನು ಲೀಸ್ಗೆ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೈಶುಗರ್ ಶಾಲೆ ಯಾರ ಅಪ್ಪಂದು ಎಂದು ಲೀಸ್ಗೆ ಕೊಡ್ತಾ ಇದ್ದಾರೆ.
ಪುಣ್ಯಾತ್ಮರು ಕಟ್ಟಿರುವ ಶಾಲೆಯನ್ನು ಲೀಸ್ಗೆ ಹಾಕಲು ಹೋಗ್ತಾ ಇದ್ದಾರೆ. ಮೈಶುಗರ್ ಶಾಲೆಯ ಪ್ರಾಪರ್ಟಿ ಬೆಲೆ ಎಷ್ಟಿದೆ ಗೊತ್ತಾ? ಎಂದು ಪ್ರಶ್ನಿಸಿದರು.
ಇನ್ನು ಮೈಶುಗರ್ ಶಾಲೆ ಅಭಿವೃದ್ಧಿಗೆ ಎಷ್ಟು ಕೋಟಿ ಬೇಕು ಅದನ್ನು ಕೊಡಲು ನಾನು ತಯಾರಿದ್ದೇನೆ. ಸಂಬಳ ಕೊಡಲು ಫಿಕ್ಸೇಡ್ ಇಡಲು ತಯಾರಿದ್ದೇನೆ. ನಾನು ಮೈಶುಗರ್ ಶಾಲೆಗೆ ಒಬ್ಬ ಸದಸ್ಯ ಇದ್ದೇನೆ. ನನ್ನ ಬಳಿ ಯಾವನು ಬಂದು ಚರ್ಚೆ ಮಾಡಿದ್ದಾನೆ. ನಾನು ಒಬ್ಬ ಟ್ರಸ್ಟಿ ಇದ್ದೇನೆ. ಯಾವ ಕಾನೂನು ಆಧಾರದ ಮೇಲೆ ಲೀಸ್ಗೆ ಕೊಡಲು ಹೊರಟಿದ್ದಾರೆ. ಮೈಶುಗರ್ ಶಾಲೆ ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…