ಮಂಡ್ಯ

ಮೇಲುಕೋಟೆ | ಉಪರಾಷ್ಟ್ರಪತಿ ಭೇಟಿ ಹಿನ್ನೆಲೆ : ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ಪರಿಶೀಲನೆ

ಮಂಡ್ಯ : ಅ.9ರ ಭಾನುವಾರ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇಲುಕೋಟೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಹಾಗೂ ಟೇಕಾಫ್ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಭದ್ರತಾ ಪರಿಶೀಲನೆ ನಡೆಸಿದರು.

ಮೇಲುಕೋಟೆಯ ಹೆಲಿಕಾಪ್ಟರ್ ಲ್ಯಾಂಡಿಂಗ್ ಸ್ಥಳಕ್ಕೆ ಭೇಟಿ ನೀಡಿ, ಭಾರತೀಯ ವಾಯುಸೇನೆಯ ಅಧಿಕಾರಿಗಳ ಜತೆಗೂಡಿ ಹೆಲಿಕ್ಯಾಪ್ಟರ್ ಟೇಕಾಫ್ ಮಾಡುವ ಮೂಲಕ ಪರೀಕ್ಷೆ ನಡೆಸಿ ಸುರಕ್ಷತೆಯ ಕುರಿತಾಗಿ ಪರಿಶೀಲನೆ ಮಾಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ, ಉಪರಾಷ್ಟ್ರಪತಿಯವರು ಭಾರತೀಯ ವಾಯು ಸೇವೆಯ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಮೇಲುಕೋಟೆಗೆ ಆಗಮಿಸಿ ಇದೇ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ :-ಮಳವಳ್ಳಿ | ಲಂಚ ; ಲೋಕಾ ಬಲೆಗೆ ಪೊಲೀಸ್‌ ಹೆಡ್ ಕಾನ್‌ಸ್ಟೆಬಲ್‌

ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಮೈದಾನದಲ್ಲಿ ಉಪರಾಷ್ಟ್ರಪತಿಗಳ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಮಾಡಲು ಮಾತ್ರ ಸ್ಥಳವಕಾಶವಿದ್ದು, ಬೆಂಗಾವಲುಪಡೆಯ ಸೇನಾ ಹೆಲಿಕ್ಯಾಪ್ಟರ್‌ಗಳನ್ನು ಲ್ಯಾಂಡಿಂಗ್ ಮಾಡಲು ಎಸ್.ಇ.ಟಿ. ಪಾಲಿಟೆಕ್ನಿಕ್ ಮೈದಾನದಲ್ಲಿ ಅವಕಾಶ ಮಾಡಲಾಗಿದೆ ಎಂದರು.

ಶ್ರೀಯೋಗನರಸಿಂಹಸ್ವಾಮಿ ಬೆಟ್ಟದ ಹಿನ್ನೆಲೆಯಲ್ಲಿ ಹೆಲಿಕ್ಯಾಪ್ಟರ್ ಹಾರಾಟ ಮಾಡುತ್ತಿರುವ ಮತ್ತು ಟೇಕಾಪ್ ಆಗುವುದನ್ನು ನೂರಾರು ಸಂಖ್ಯೆಯಲ್ಲಿ ಸೇರಿದ ನಾಗರಿಕರು ಮತ್ತು ವಿದ್ಯಾರ್ಥಿಗಳು ವೀಕ್ಷಿಸಿ ಆನಂದಿಸಿದರು.

ಭಾರೀ ಭದ್ರತೆ:
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ನ.9 ರಂದು ಹೆಲಿಪ್ಯಾಡ್‌ನಲ್ಲಿ ಹಾಜರಿದ್ದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಸ್ವಾಗತಿಸಿ ಚೆಲುವನಾರಾಯಣಸ್ವಾಮಿ ದೇವಾಲಯದ ದರ್ಶನ ಪಡೆಯುವವರೆಗೂ ಇರಲಿದ್ದಾರೆ. ಉಪರಾಷ್ಟ್ರಪತಿಯ ಭೇಟಿಯ ಹಿನ್ನೆಲೆಯಲ್ಲಿ ಮೇಲುಕೋಟೆಯಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ವಾಯುಪಡೆಯ ಅಧಿಕಾರಿಗಳು ಹೆಲಿಕ್ಯಾಪ್ಟರ್ ಚಲನವಲನದ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.
ಉಪವಿಭಾಗಾಧಿಕಾರಿ ಡಾ.ಶ್ರೀನಿವಾಸ್, ತಹಸಿಲ್ದಾರ್ ಬಸವರೆಡ್ಡಪ್ಪ ರೋಣದ, ಮುಜರಾಯಿ ತಹಸಿಲ್ದಾರ್ ತಮ್ಮೇಗೌಡ, ಉಪತಹಸಿಲ್ದಾರ್ ರಾಜೇಶ್, ಗ್ರಾಮಾಧಿಕಾರಿ ರಮೇಶ್, ದೇವಾಲಯದ ಇಒ ಶೀಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಹರಿಧರ್, ಉಪಾಧ್ಯಕ್ಷ ಜಿ.ಕೆ.ಕುಮಾರ್, ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

18 mins ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

32 mins ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

47 mins ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

58 mins ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

2 hours ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

3 hours ago