ಮಂಡ್ಯ/ ಮೇಲುಕೋಟೆ: ಇಲ್ಲಿನ ಕಜ್ಜಿ ಕೊಪ್ಪಲು ಗ್ರಾಮದಲ್ಲಿ ಮಣ್ಣು ಕುಸಿದು ಹಾಳಾಗಿದ್ದ ನಾಲೆಯ ದುರಸ್ತಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಭಾನುವಾರ(ಜು.14) ಗುದ್ದಲಿ ಪೂಜೆ ನೇರವೇರಿಸಿದರು.
ನಂತರ ಮಾತನಾಡಿದ ಸಚಿವ ಎನ್ ಚಲುವರಾಯಸ್ವಾಮಿ, ಮೇಲುಕೋಟೆಯ ಕಜ್ಜಿಕೊಪ್ಪಲು ಗ್ರಾಮದಲ್ಲಿ ಕಾಲುವೆ ಮಣ್ಣು ಕುಸಿದು, ಮುಂದೆ ನೀರು ಹೋಗಲು ಸಮಸ್ಯೆ ಆಗಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಕಾಲುವೆ ದುರಸ್ತಿಗೆ ಮನವಿ ಮಾಡಿದ್ರು, ಅದಕ್ಕಾಗಿ 20 ಕೋಟಿ ವೆಚ್ಚದಲ್ಲಿ ಕಾಲುವೆ ದುರಸ್ತಿ ಮಾಡಲು ಹಣ ಬಿಡುಗಡೆ ಮಾಡಿದ್ದೇವೆ. ಕಾಮಗಾರಿ ಬೇಗನೆ ಪೂರ್ಣಗೊಳಿಸಲು ಸೂಚಿಸಿದ್ದೇನೆ. ಇದರಿಂದ ರೈತರಿಗೆ ನೀರು ಬೇಗ ತಲುತ್ತದೆ ಎಂದು ತಿಳಿಸಿದರು.
ಬೆಂಗಳೂರು-ಮೈಸೂರು ನ್ಯಾಷನಲ್ ಹೈವೇ ಕೆಲಸ ನೆಡೆಯುವಾಗ ಹೊಳಲು ಗ್ರಾಮದಿಂದ ದುದ್ದವರಗೆ ರಸ್ತೆ ತುಂಬಾ ಹಾಳಾಗಿದೆ. ಇದನ್ನ ಸರಿ ಪಡಿಸಲು ಗ್ರಾಮಸ್ಥರು ಮನವಿ ಮಾಡಿದ್ರು, ಅದರಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಜೊತೆ ರಸ್ತೆ ವೀಕ್ಷಣೆ ಮಾಡಿದ್ದೇನೆ. ಈ ಬಗ್ಗೆ ನ್ಯಾಷನಲ್ ಹೈವೇ ಪ್ರಾಧಿಕಾರದವರ ಬಳಿ ಮಾತನಾಡಿ, ರಿಪೋರ್ಟ್ ಕೇಳಿದ್ದೇನೆ. ಜತೆಗೆ ತಕ್ಷಣಕ್ಕೆ ಈ ರಸ್ತೆಯನ್ನು ತಾತ್ಕಾಲಿಕವಾಗಿ ಸರಿ ಮಾಡಲು ಕ್ರಮ ಕೈಗೊಳ್ಳಲು ಹೇಳಿದ್ದೇನ ಎಂದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…