ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯಿಂದ ಜರುಗಿತು.
ಸಾವಿರಾರು ಭಕ್ತರು ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣಸ್ವಾಮಿಗೆ ವೈರಮುಡಿ (ರತ್ನಕಿರೀಟ) ಧಾರಣೆ ಮಾಡುವ ಅಪೂರ್ವ ದೃಶ್ಯವನ್ನು ಕಣ್ತುಂಬಿಕೊಂಡರು.
ವೈರಮುಡಿ ಉತ್ಸವದ ವಿಶೇಷತೆ ಎಂದರೆ ದೇವರಿಗೆ ಧರಿಸುವ ಅಮೂಲ್ಯ ರತ್ನದಿಂದ ಕೂಡಿದ ವೈರಮುಡಿ ಕಿರೀಟ. ಈ ಕಿರೀಟವನ್ನು ವರ್ಷಕ್ಕೊಮ್ಮೆ ಮಾತ್ರ ದೇವರಿಗೆ ಧರಿಸಲಾಗುತ್ತದೆ.
ದೇವಾಲಯ ಆಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿತ್ತು. ಗುರುವಾರದಿಂದಲೇ ಆರಂಭವಾದ ಬ್ರಹ್ಮೋತ್ಸವದ ಭಾಗವಾಗಿ ಈ ವೈರಮುಡಿ ಮಹೋತ್ಸವ ನಡೆಯಿತು. ಮಹಾರಥೋತ್ಸವ, ಗಜೇಂದ್ರಮೋಕ್ಷ, ಬಂಗಾರದ ಪಲ್ಲಕ್ಕಿ ಉತ್ಸವ ಸೇರಿದಂತೆ ಉತ್ಸವದ ವಿವಿಧ ಕಾರ್ಯಕ್ರಮಗಳು ಮುಂದುವರೆಯುತ್ತಿವೆ.
ಈ ಬಾರಿ ವೈರಮುಡಿ ಬ್ರಹ್ಮೋತ್ಸವದಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದರು. ಸಂಜೆ ವೇಳೆಗೆ ಪಾರ್ಕಿಂಗ್ ಸ್ಥಳಗಳೆಲ್ಲಾ ಭರ್ತಿಯಾಗಿದ್ದವು. ಇಷ್ಟು ವರ್ಷಗಳ ಪೈಕಿ ಈ ವರ್ಷ ಮೊದಲ ಬಾರಿಗೆ ದಾಖಲೆ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು ಎಂದು ಉಪವಿಭಾಗಾಧಿಕಾರಿ ಶ್ರೀನಿವಾಸ್ ಹೇಳಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…