Mysore
21
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೇಲುಕೋಟೆ | ವೈರಮುಡಿ ಉತ್ಸವ ಕುರಿತು ಸ್ಥಳ ಪರಿಶೀಲನೆ

ಮಂಡ್ಯ: ಜಿಲ್ಲೆಯ ಮೇಲುಕೋಟೆಯಲ್ಲಿ ಏ.7 ರಂದು ನಡೆಯುವ ವೈರಮುಡಿ ಉತ್ಸವ ಕುರಿತು ಜಿಲ್ಲಾಧಿಕಾರಿ ಡಾ: ಕುಮಾರ ಬುಧವಾರ ಉತ್ಸವದ ಸಿದ್ದತೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಸಂಚಾರ ವ್ಯವಸ್ಥೆ ಪಾರ್ಕಿಂಗ್, ಭಕ್ತಾಧಿಗಳಿಗೆ ಮಾಡಿಕೊಂಡಿರುವ ಸಿದ್ಧತೆ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಭರದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮುಜರಾಯಿ ತಹಶೀಲ್ದಾರ್ ತಮ್ಮೇಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!