Mysore
29
few clouds

Social Media

ಸೋಮವಾರ, 23 ಮಾರ್ಚ್ 2026
Light
Dark

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮ ಮಂಡ್ಯ ವಿಭಾಗದ ವತಿಯಿಂದ ಮಂಡ್ಯ ಜಿಲ್ಲೆ ವ್ಯಾಪ್ತಿಯ ಮಂಡ್ಯ, ನಾಗಮಂಗಲ, ಕೆ.ಆರ್.‌ಪೇಟೆ, ಶ್ರೀರಂಗಪಟ್ಟಣ, ಪಾಂಡವಪುರ ಬಸ್‌ ನಿಲ್ದಾಣಗಳಿಂದ ಹಾಗೂ ಮೈಸೂರು, ಹಾಸನ, ತುಮಕೂರು, ಮತ್ತು ಬೆಂಗಳೂರು ಬಸ್‌ ನಿಲ್ದಾಣಗಳಿಂದ ಹೆಚ್ಚುವರಿಯಾಗಿ ಆದಿಚುಂಚನಗಿರಿಗೆ 140 ಬಸ್‌ಗಳ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Tags:
error: Content is protected !!