ಮಂಡ್ಯ

ಮ-ನರೇಗಾ ಯೋಜನೆ ; ಶೇ.102 ರ ಗುರಿ ಸಾಧಿಸಿದ ಮಂಡ್ಯ

ಮಂಡ್ಯ : ಗ್ರಾಮೀಣ ಭಾಗದ ಜನರ ಜೀವನೋಪಯ ಮಾರ್ಗಕ್ಕೆ ವರದಾನವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು 2024-25ನೇ ಸಾಲಿನಲ್ಲಿ ಶೇ.102 ರಷ್ಟು ಗುರಿ ಮೀರಿದ ಸಾಧನೆ ಮಾಡುವ ಮೂಲಕ ಮಂಡ್ಯ ಜಿಲ್ಲಾ ಪಂಚಾಯತ್ ಉತ್ತಮ ಸಾಧನೆ ಮಾಡಿದೆ.

ಮ-ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 3,44,904 ಲಕ್ಷ ಕುಟುಂಬಗಳಿಗೆ ಉದ್ಯೋಗ ಚೀಟಿ ವಿತರಿಸಲಾಗಿದೆ. ಇದರಲ್ಲಿ 1,46,039 ಕುಟುಂಬಗಳ ಉದ್ಯೋಗ ಚೀಟಿಗಳು ಸಕ್ರಿಯವಾಗಿದ್ದು, 258697 ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.

ಗುರಿ ಸಾಧಿಸಿರುವ ತಾಲ್ಲೂಕು;
ಜಿಲ್ಲೆಯಲ್ಲಿ ಒಟ್ಟು 27 ಲಕ್ಷ ಮಾನವ ದಿನಗಳ ಗುರಿ ನಿಗಧಿಯಾಗಿತ್ತು. ಇದರಲ್ಲಿ ಜಿಲ್ಲೆ 2769096 ಗುರಿ ಸಾಧಿಸಿದ್ದು, ಶೇ.102.55 ರಷ್ಟು ಗುರಿ ಸಾಧಿಸಿದೆ. ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕು ಶೇ.144.55 ರಷ್ಟು ಗುರಿ ಸಾಧನೆ ಮಾಡಿದೆ. ನಿಗದಿತ ಗುರಿ ಮೀರಿದ ಸಾಧನೆ ಮಾಡಿದೆ. ಈ ತಾಲೂಕಿನಲ್ಲಿ ಒಟ್ಟು 528538 ಮಾನವ ದಿನ ಸೃಜನೆ ಗುರಿ ಹೊಂದಲಾಗಿದ್ದು, ಇದರಲ್ಲಿ 764005 ಮಾನವ ದಿನಗಳನ್ನು ಪೂರ್ತಿಗೊಳಿಸಿ ದಾಖಲೆ ಬರೆದಿದೆ ಹಾಗೂ ಮದ್ದೂರು ತಾಲ್ಲೂಕಿನ 649083 ಮಾನವ ದಿನ ಗುರಿಯಲ್ಲಿ 689083 ಪೂರೈಸಿ ಶೇ.106.63 ರಷ್ಟು ಸಾಧನೆ ಮಾಡಿದೆ. ಗುರಿಗೂ ಮೀರಿ ಸಾಧನೆ ಮಾಡಿದ್ದು, ಇನ್ನೂ ಉಳಿದ 05 ತಾಲ್ಲೂಕುಗಳಲ್ಲಿ ಶೇ 70 ರಿಂದ 90 ರಷ್ಟು ಮಾನವದಿನ ಸೃಜಿಸಿದೆ. ಮನರೇಗಾ ಯೋಜನೆ ಉದ್ಯೋಗ ನೀಡಿ ಜನರ ವಲಸೆ ತಪ್ಪಿಸಿ ಗ್ರಾಮೀಣ ಜನರ ಸಬಲೀಕರಣಕ್ಕೆ ಸಾಕ್ಷಿಯಾಗಿದೆ.

ಕ್ರಿಯಾ ಯೋಜನೆ ;
2025-26 ನೇ ಸಾಲಿನಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳ ಕ್ರಿಯಾ ಯೋಜನೆಯನ್ನು ಅನುಮೋದನೆ ನೀಡಲಾಗಿದೆ. ಗ್ರಾಮ ಪಂ. ಗಳಲ್ಲಿ ಗ್ರಾಮೀಣ ಭಾಗಕ್ಕೆ ಹಾಗೂ ಜನರ ಅನುಕೂಲವಾಗುವಂತಹ ಕಾಮಗಾರಿಗಳನ್ನು ಅನುಮೋದನೆ ನೀಡಲಾಗಿದ್ದು ಕಾಮಗಾರಿಗಳ ಅನುಷ್ಟಾನಕ್ಕೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕೂಲಿ ಹೆಚ್ಚಳ ;
ಈ ಯೋಜನೆಯಡಿ ಆಯಾ ರಾಜ್ಯಗಳಿಗೆ ಅನುಗುಣವಾಗಿ ಕೂಲಿಯನ್ನು ನಿಗದಿ ಮಾಡಲಾಗಿದೆ. ಇದೀಗ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯವು ಮ-ನರೇಗಾ ಯೋಜನೆ ಕೂಲಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರನ್ವಯ ಕರ್ನಾಟಕದಲ್ಲಿ 2024-25 ನೇ ಸಾಲಿನಲ್ಲಿ 349 ರೂ. ಗಳಿಂದ ಕೂಲಿಯನ್ನು 2025-26 ನೇ ಸಾಲಿನಲ್ಲಿ 370 ರೂ.ಗಳಿಗೆ ಕೂಲಿ ಹೆಚ್ಚಳ ಮಾಡಿದೆ. ಏಪ್ರಿಲ್‌ 1, 2025 ರಿಂದ 370 ರೂ.ಗಳ ಕೂಲಿ ಜಾರಿಯಲ್ಲಿರುತ್ತದೆ.

ಏಕೀಕೃತ ಸಹಾಯವಾಣಿ ;
ಮಹಾತ್ಮ ಗಾಂಧಿ ನರೇಗಾ ಯೋಜನೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಯೋಜನೆಗಳ ಮಾಹಿತಿಗಾಗಿ ಹಾಗೂ ಕುಂದುಕೊರತೆಗಳ ನಿವಾರಣೆಗಾಗಿ ಏಕೀಕೃತ ಸಹಾಯವಾಣಿ 8277506000 ಅನ್ನು ಸ್ಥಾಪಿಸಲಾಗಿರುತ್ತದೆ. ಯಾವುದೇ ಮಾಹಿತಿಗಾಗಿ ಹಾಗೂ ಕುಂದುಕೊರತೆಗಳ ನಿವಾರಣೆಗಾಗಿ 8277506000 ಸಂಖ್ಯೆಗೆ ಕರೆ ಮಾಡಬಹುದು.

ಮ-ನರೇಗಾ ಯೋಜನೆಯಡಿಯಲ್ಲಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ಒಳಗೊಂಡಂತೆ 2024-25 ನೇ ಸಾಲಿನಲ್ಲಿ ವಾರ್ಷಿಕ ಗುರಿ ಮೀರಿ ಮಂಡ್ಯ ಜಿಲ್ಲೆ ಶೇ. 102 ರಷ್ಟು ಮಾನವದಿನ ಸೃಜನೆ ಮಾಡಿ ಪ್ರಗತಿ ಸಾಧಿಸಿದೆ. ಮನರೇಗಾ ಯೋಜನೆಯು ಗ್ರಾಮೀಣ ಭಾಗದ ಜನರ ಬದುಕಿಗೆ ಆಶಾಕಿರಣವಾಗಿದ್ದು ಏ.01 ಕೂಲಿದರ ಹೆಚ್ಚಾಗಿದ್ದು ನರೇಗಾ ಯೋಜೆಯ ಕೂಲಿಕಾರರು ನಿರಂತರವಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್  ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

30 mins ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

41 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

1 hour ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

2 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

3 hours ago