ಮಂಡ್ಯ

ಮೈಕ್ರೋ ಫೈನಾನ್ಸ್ ಗಳು ದಬ್ಬಾಳಿಕೆ ನಡೆಸುವಂತಿಲ್ಲ: ಡಿಸಿ ಎಚ್ಚರಿಕೆ

 ಸಾಲ ವಸೂಲಾತಿ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದಲ್ಲಿ ಕಠಿಣ ಕ್ರಮ: ಡಾ: ಕುಮಾರ

ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ನೀಡಿದ ನಂತರ ಸಾಲದ ಕಂತು ಹಿಂಪಡೆಯಲು ಹೋಗುವ ಸಿಬ್ಬಂದಿಗಳು ಸಭ್ಯವಾಗಿ ವರ್ತಿಸಬೇಕು. ಅವರನ್ನು ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ್‌  ಎಚ್ಚರಿಕೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆಯಲ್ಲಿ ಮಾತನಾಡಿದರು. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆಯುವವರು ಬಡ ಕುಟುಂಬದವರು ಹಾಗೂ ಅವರು ಸಾಲ ಪಡೆಯುವುದು ಕೇವಲ ಒಂದರಿಂದ ಎರಡು ಲಕ್ಷ ಆಗಿರುತ್ತದೆ. ಅವರು ಸಾಲದ ಕಂತು ಪಾವತಿ ಕೇವಲ ಸಾವಿರ ಇರುತ್ತದೆ. ಅವರನ್ನು ಸಾಲ ಮರುಪಾವತಿ ಮಾಡಿಲ್ಲ ಎಂದು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದನಿಂದನೆ ಮಾಡುವುದು, ದಬ್ಬಾಳಿಕೆ ಮಾಡುವುದರಿಂದ ಅವಮಾನಕ್ಕೆ ಒಳಗಾಗಿ ಆತ್ಮಹತ್ಯೆಯಂತಹ ಕೃತ್ಯ ಸಂಭವಿಸುತ್ತಿಸೆ. ಇದು ನಾಗರೀಕ ಸಮಾಜ ತಲೆ ತಗ್ಗಿಸುವ ರೀತಿ ಮಾಡುತ್ತಿದೆ ಎಂದರು.

ಆರ್.ಬಿ.ಐ ನಿಯಮ ಪಾಲಿಸಿ ಆರ್. ಬಿ.ಐ ನಲ್ಲಿ ಸಾಲ ವಸೂಲಾತಿ ಮಾಡಲು ಸಮಯ ನಿಗದಿಯಾಗಿರುತ್ತದೆ. ನಿಗದಿ ಪಡಿಸಿರುವ ಸಮಯದಲ್ಲಿ ಮಾತ್ರ ಸಿಬ್ಬಂದಿಗಳು ಸಾಲದ ಕಂತು ಪಡೆಯಲು ಮನೆಗಳಿಗೆ ತೆರಳಬೇಕು ಎಂದರು.

ಸಾಲದ ಕಂತು ಪಡೆಯಲು ಮನೆಗಳಿಗೆ ಭೇಟಿ ನೀಡಿದಾಗ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಬೇಕು. ಮನೆಯಲ್ಲಿ ನೆಂಟರು ಅಥವಾ ಮಕ್ಕಳ ಮುಂದೆ ಸಾಲದ ಕಂತು ಮರುಪಾವತಿ ಮಾಡಿ ಎಂದು ಕೇಳಿದಾಗ ಸಾರ್ವಜನಿಕವಾಗಿ ಅವಮಾನವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು.

ಸಾಲದ ಮೇಲೆ ವಿಧಿಸುವ ಬಡ್ಡಿಯ ಬಗ್ಗೆ ಮಾಹಿತಿ ನೀಡಬೇಕು ಸಾರ್ವಜನಿಕರಿಗೆ ಸಾಲವನ್ನು ಮಂಜೂರಾತಿ ಮಾಡುವಾಗ ಸಾಲದ ಮೇಲೆ ವಿಧಿಸುವ ಬಡ್ಡಿ, ಪ್ರೊಸೆಸಿಂಗ್ ಶುಲ್ಕದ ಬಗ್ಗೆ ಕನ್ನಡದಲ್ಲಿ ತಿಳಿಸಿ. ಸಾಲ ಮರುಪಾವತಿಗೆ ವಿಧಿಸಿರುವ ಷರತ್ತುಗಳನ್ನು ಕನ್ನಡದಲ್ಲಿ ತಿಳಿಸಬೇಕು ಎಂದು ಸೂಚಿಸಿದರು.

ಸಾಲದ ಕಂತು ಮರುಪಾವತಿ ಮಾಡಲು ತಡ ಮಾಡಿದರೆ ಲಿಖಿತವಾಗಿ ನೊಟೀಸ್ ಜಾರಿ ಮಾಡಿ. ಅವರ ಕಷ್ಟಗಳ ಬಗ್ಗೆ ತಿಳಿದುಕೊಂಡು ಸಮಯಾವಕಾಶ ನೀಡಿ ಎಂದರು.

ದೂರು ಕೇಂದ್ರ ತೆರೆಯಿರಿ

ಮೈಕ್ರೋ ಫೈನಾನ್ಸ್ ಕುರಿತು ಹಲವಾರು ದೂರುಗಳು ಜಿಲ್ಲಾಡಳಿತಕ್ಕೆ ಬರುತ್ತದೆ. ಅವುಗಳನ್ನು ‌ಪರಿಶೀಲಿಸಲು ಜಿಲ್ಲಾ ಮಟ್ಟದಲ್ಲಿ ಒಂದು ದೂರು ಕೇಂದ್ರ ಹಾಗೂ ತಾಲ್ಲೂಕು ಮಟ್ಟದಲ್ಲಿ ಒಬ್ಬರು ನೋಡಲ್ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದರು.

ತರಬೇತಿ ನೀಡಿ ಹಾಗೂ ವರದಿ ಸಲ್ಲಿಸಿ ಜಿಲ್ಲೆಯಲ್ಲಿರುವ ಮೈಕ್ರೋ ಫೈನಾನ್ಸ್ ಗಳು ತಮ್ಮ ಸಿಬ್ಬಂದಿಗಳಿಗೆ ಸಾಲ ವಸೂಲಾತಿ ಮಾಡುವಾಗ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವ ಬಗ್ಗೆ ತರಬೇತಿ ನೀಡಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು ಎಂದರು.

ಮೈಕ್ರೋ ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಗುರುತಿನ ಚೀಟಿ ನೀಡಬೇಕು. ಅವರು ತಮ್ಮ ಸಂಸ್ಥೆಯ ಕಚೇರಿಯ ಮುಂದೆ ನಾಮಫಲಕಗಳನ್ನು ಅಳವಡಿಸಬೇಕು‌ ಎಂದರು.

ಮುಖಂಡರಾದ ವೆಂಕಟಗಿರಿಯಯ್ಯ ಮಾತನಾಡಿ, ಡಿ.ಸಿ.ಸಿ. ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಹಿಳೆಯರಿಗೆ ಸಾಲ ನೀಡಲಾಗುತ್ತದೆ. ಇಲ್ಲಿ ಅವರೇ ಖುದ್ದು ಬ್ಯಾಂಕಿಗೆ ಹೋಗಿ ಸಾಲ ಮರುಪಾವತಿ ಮಾಡುತ್ತಾರೆ. ಇಲ್ಲಿ ಇರುವ ಒಳ್ಳೆಯ ನೀತಿಗಳನ್ನು ಮೈಕ್ರೋ ಫೈನಾನ್ಸ್ ಗಳು ಬಳಸಿಕೊಳ್ಳಬೇಕು ಎಂದರು.

ಸಾಲ ನೀಡುವಾಗ ಅವರಿಗೆ ಮರುಪಾವತಿ ಮಾಡುವ ಶಕ್ತಿಯನ್ನು ಪರಿಶೀಲಿಸದೆ ಸಾಲ ನೀಡುವುದು. 4-5 ಮೈಕ್ರೋ ಫೈನಾನ್ಸ್ ಗಳು ಒಬ್ಬರಿಗೆ ಸಾಲ ನೀಡುವುದು, ನಂತರ ದಬ್ಬಳಿಕೆಯ ಅಸ್ತ್ರ ಪ್ರಯೋಗಿಸುವುದು ಕಂಡುಬರುತ್ತಿದೆ. ಇವುಗಳನ್ನು ಸರಿಪಡಿಸಿಕೊಂಡು ಸಾರ್ವಜನಿಕರಿಗೆ ಸಹಾಯಕವಾಗುವ ರೀತಿ ಕಾರ್ಯನಿರ್ವಹಿಸಿ ಎಂದರು‌.

ಸಭೆಯಲ್ಲಿ ಮಂಡ್ಯ ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್ ಎನ್, ಮೈಕ್ರೋ ಫೈನಾನ್ಸ್ ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಮಂಜುನಾಥ್, ಹೆಗಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

21 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

22 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

22 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

22 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

22 hours ago