ಮಂಡ್ಯ

ಮೈಕ್ರೋ ಫೈನಾನ್ಸ್‌ ಕಿರುಕುಳ: ಮಹಿಳೆ ಸಾವು

ಮಂಡ್ಯ: ಮೈಕ್ರೋ ಫೈನಾನ್ಸ್‌ ಸಂಸ್ಥೆಯು ಕಿರುಕುಳ ನೀಡಿದ ಹಿನ್ನಲೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತ ದುರ್ದೈವಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬ ಮಹಿಳೆ.

ಪ್ರೇಮಾ ಎಂಬುವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ರೂ. ಸಾಲ ಪಡೆದಿದ್ದರು. ಈಗಾಗಲೇ 6 ಲಕ್ಷ ರೂ ಹಣವನ್ನು ಕಟ್ಟಿದ್ದರು. ಇನ್ನು 6 ಲಕ್ಷ ರೂ. ಹಣ ಕಟ್ಡಬೇಕೆಂದು ಬ್ಯಾಂಕ್‌ ಸಿಬ್ಬಂದಿ ಮನೆ ಸೀಜ್‌ ಮಾಡಿದ್ದರು. ಇದರಿಂದ ಮನನೊಂದು ಮಹಿಳೆ ನಿನ್ನೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರೇಮಾರನ್ನು ಮೀಮ್ಸ್‌ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತ ಪ್ರೇಮಾ ಮಗಳು ಮಾಣಿಕ್ಯ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ತಾಯಿ ಸಾವಿಗೆ ಉಜ್ಜೀವನ್‌ ಬ್ಯಾಂಕ್‌ ಸಿಬ್ಬಂದಿಗಳೆ ಕಾರಣ. ನಮ್ಮ ತಾಯಿ 2018ರಲ್ಲಿ ಉಜ್ಜೀವನ್ನ್‌ ಬ್ಯಾಂಕ್‌ನಲ್ಲಿ 6 ಲಕ್ಷ ರೂ. ಸಾಲ ಪಡೆದು ನಂತರ ಆ ಸಾಲವನ್ನು ಇಲ್ಲಿಯವರೆಗೆ ಕಟ್ಟಿ ತೀರಿಸಿದ್ದಾರೆ. ಆದರೂ ಬ್ಯಾಂಕ್‌ ಸಿಬ್ಬಂದಿಗಳು ಇನ್ನು 6 ಲಕ್ಷ ರೂ. ಹಣ ಕಟ್ಟಬೇಕೆಂದು ಹಿಂಸೆ ನೀಡಿ ಮನೆ ಸೀಜ್‌ ಮಾಡಿದ್ದಾರೆ. ಇದರಿಂದ ಮನನೊಂದ ನಮ್ಮ ತಾಯಿ ಕ್ರಿಮಿನಾಶಕ ಮಾತ್ರೆ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ನಮಗೆ ಯಾರು ದಿಕ್ಕು ಎಂದು ಅಳಲು ತೋಡಿಕೊಂಡರು.

ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ್‌ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮಗಳ ಮದುವೆಗೆ ಮೃತ ಪ್ರೇಮಾ ಉಜ್ಜೀವನ್‌ ಬ್ಯಾಂಕ್‌ನಿಂದ 6ಲಕ್ಷ ರೂ. ಹಣ ಸಾಲ ಪಡೆದು ಇಲ್ಲಿಯವರೆಗೆ ಸಾಲ ಕಟ್ಟಿಕೊಂಡು ಬಂದಿದ್ದರು. ಕಳೆದ ಮೂರು ತಿಂಗಳಿನಿಂದ ಅವರು ಸಾಲ ಕಟ್ಟಿರಲಿಲ್ಲ. ಹೀಗಾಗಿ ಉಜ್ಜೀವನ್‌ ಬ್ಯಾಂಕ್‌ನವರು ಕೋರ್ಟ್‌ನಿಂದ ಸ್ಟೇ ತಂದು ಮನೆ ಜಪ್ತಿ ಮಾಡಿದ್ದಾರೆ. ಇದರಿಂದ ಮನನೊಂದು ಪ್ರೇಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಕೋರ್ಟ್‌ನಿಂದ ಆರ್ಡರ್‌ ಇರೋದರಿಂದ ನಾವು ನಮ್ಮ ಇತಿಮಿತಿಯಲ್ಲಿ ಕೆಲಸ ಮಾಡಬೇಕಾಗುತ್ತದೆ. ಜಪ್ತಿ ಮಾಡಿರುವ ಮನೆ ವಾಪಸ್‌ ಮಾಡಲು ಬ್ಯಾಂಕ್‌ಗೆ ತಿಳಿಸಿದ್ದೇವೆ. ಜೊತೆಗೆ ಜಿಲ್ಲಾಡಳಿತದಿಂದ ಪರಿಹಾರದ ಬಗ್ಗೆಯೂ ಚಿಂತಿಸಿದ್ದೇವೆ ಎಂದು ತಿಳಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

1 min ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

9 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

15 mins ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

15 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

16 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

16 hours ago