ಮಂಡ್ಯ

ಮೈಕ್ರೋ ಫೈನಾನ್ಸ್‌ ಕಿರುಕುಳ: ಮಹಿಳೆ ಸಾವು

ಮಂಡ್ಯ: ಮೈಕ್ರೋ ಫೈನಾನ್ಸ್‌ ಸಂಸ್ಥೆಯು ಕಿರುಕುಳ ನೀಡಿದ ಹಿನ್ನಲೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತ ದುರ್ದೈವಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬ ಮಹಿಳೆ.

ಪ್ರೇಮಾ ಎಂಬುವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ರೂ. ಸಾಲ ಪಡೆದಿದ್ದರು. ಈಗಾಗಲೇ 6 ಲಕ್ಷ ರೂ ಹಣವನ್ನು ಕಟ್ಟಿದ್ದರು. ಇನ್ನು 6 ಲಕ್ಷ ರೂ. ಹಣ ಕಟ್ಡಬೇಕೆಂದು ಬ್ಯಾಂಕ್‌ ಸಿಬ್ಬಂದಿ ಮನೆ ಸೀಜ್‌ ಮಾಡಿದ್ದರು. ಇದರಿಂದ ಮನನೊಂದು ಮಹಿಳೆ ನಿನ್ನೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರೇಮಾರನ್ನು ಮೀಮ್ಸ್‌ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತ ಪ್ರೇಮಾ ಮಗಳು ಮಾಣಿಕ್ಯ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ತಾಯಿ ಸಾವಿಗೆ ಉಜ್ಜೀವನ್‌ ಬ್ಯಾಂಕ್‌ ಸಿಬ್ಬಂದಿಗಳೆ ಕಾರಣ. ನಮ್ಮ ತಾಯಿ 2018ರಲ್ಲಿ ಉಜ್ಜೀವನ್ನ್‌ ಬ್ಯಾಂಕ್‌ನಲ್ಲಿ 6 ಲಕ್ಷ ರೂ. ಸಾಲ ಪಡೆದು ನಂತರ ಆ ಸಾಲವನ್ನು ಇಲ್ಲಿಯವರೆಗೆ ಕಟ್ಟಿ ತೀರಿಸಿದ್ದಾರೆ. ಆದರೂ ಬ್ಯಾಂಕ್‌ ಸಿಬ್ಬಂದಿಗಳು ಇನ್ನು 6 ಲಕ್ಷ ರೂ. ಹಣ ಕಟ್ಟಬೇಕೆಂದು ಹಿಂಸೆ ನೀಡಿ ಮನೆ ಸೀಜ್‌ ಮಾಡಿದ್ದಾರೆ. ಇದರಿಂದ ಮನನೊಂದ ನಮ್ಮ ತಾಯಿ ಕ್ರಿಮಿನಾಶಕ ಮಾತ್ರೆ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ನಮಗೆ ಯಾರು ದಿಕ್ಕು ಎಂದು ಅಳಲು ತೋಡಿಕೊಂಡರು.

ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ್‌ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮಗಳ ಮದುವೆಗೆ ಮೃತ ಪ್ರೇಮಾ ಉಜ್ಜೀವನ್‌ ಬ್ಯಾಂಕ್‌ನಿಂದ 6ಲಕ್ಷ ರೂ. ಹಣ ಸಾಲ ಪಡೆದು ಇಲ್ಲಿಯವರೆಗೆ ಸಾಲ ಕಟ್ಟಿಕೊಂಡು ಬಂದಿದ್ದರು. ಕಳೆದ ಮೂರು ತಿಂಗಳಿನಿಂದ ಅವರು ಸಾಲ ಕಟ್ಟಿರಲಿಲ್ಲ. ಹೀಗಾಗಿ ಉಜ್ಜೀವನ್‌ ಬ್ಯಾಂಕ್‌ನವರು ಕೋರ್ಟ್‌ನಿಂದ ಸ್ಟೇ ತಂದು ಮನೆ ಜಪ್ತಿ ಮಾಡಿದ್ದಾರೆ. ಇದರಿಂದ ಮನನೊಂದು ಪ್ರೇಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಕೋರ್ಟ್‌ನಿಂದ ಆರ್ಡರ್‌ ಇರೋದರಿಂದ ನಾವು ನಮ್ಮ ಇತಿಮಿತಿಯಲ್ಲಿ ಕೆಲಸ ಮಾಡಬೇಕಾಗುತ್ತದೆ. ಜಪ್ತಿ ಮಾಡಿರುವ ಮನೆ ವಾಪಸ್‌ ಮಾಡಲು ಬ್ಯಾಂಕ್‌ಗೆ ತಿಳಿಸಿದ್ದೇವೆ. ಜೊತೆಗೆ ಜಿಲ್ಲಾಡಳಿತದಿಂದ ಪರಿಹಾರದ ಬಗ್ಗೆಯೂ ಚಿಂತಿಸಿದ್ದೇವೆ ಎಂದು ತಿಳಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

3 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

4 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

5 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

10 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

17 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

17 hours ago