ಮಂಡ್ಯ : ಕಾವೇರಿ ಹೋರಾಟ ಹತ್ತಿಕ್ಕಲು ಪೊಲೀಸರು ಯತ್ನಿಸಿದ್ದಾರೆ ಎಂದು ಹೋರಾಟಗಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹೋರಾಟಕ್ಕೆ ಬರುತ್ತಿದ್ದವರನ್ನು ಪೊಲೀಸರು ತಡೆದಿದ್ದಾರೆ ಎಂದು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಧರಣಿ ಸ್ಥಳದಲ್ಲಿ ಹೋರಾಟಗಾರರು ಪೊಲೀಸರ ವಿರುದ್ಧ ಕಿಡಿಕಾರಿದರು.
ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆಯ ಕೇಂದ್ರ ಸ್ಥಳ ಜಯಚಾಮರಾಜೇಂದ್ರ ಒಡೆಯರ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಪೊಲೀಸರೇ ಬಂದ್ ಮಾಡಿದ್ದರು. ವೃತ್ತದ ಕಡೆಗೆ ನಾಲ್ಕು ದಿಕ್ಕಿನಲ್ಲೂ ಯಾವುದೇ ವಾಹನ ಸಂಚಾರ ಮಾಡದಂತೆ ಬ್ಯಾರಿಕೇಡ್ ಹಾಕಲಾಗಿತ್ತು, ಪಶ್ಚಿಮ ಪೊಲೀಸ್ ಠಾಣೆ ಹಾಗೂ ಕರ್ನಾಟಕ ಬಾರ್ ವೃತ್ತದ ಬಳಿ ರಸ್ತೆ ಬಂದ್ ಮಾಡಿದ್ದರೆ.
ಹೆದ್ದಾರಿಯಲ್ಲಿ ಪಿಇಎಸ್ ಕಾಲೇಜ್, ಕಾವೇರಿ ನೀರಾವರಿ ನಿಗಮ ಕಚೇರಿ ಸೇರಿ ಹಲವು ಕಡೆ ಮತ್ತು ಹೊಳಲು ವೃತ್ತದಿಂದ ವಾಹನಗಳು ಬಾರದಂತೆ ತಡೆ ಮಾಡಿದ್ದರು.
ಪೊಲೀಸರ ಇಂತಹ ಕ್ರಮ ಕಾವೇರಿ ಹೋರಾಟಗಾರರನ್ನು ರೊಚ್ಚಿಗೆಬ್ಬಿಸಿತು ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ ಎಂದು ಆಕ್ರೋಶಿಸಿದರು. ಅಲ್ಲದೆ ಹೋರಾಟಗಾರರೇ ತೆರಳಿ ಬ್ಯಾರಿಕೇಡ್ ಗಳನ್ನು ಕಿತ್ತು ಒಗೆಯುವುದಾಗಿ ಕಿಡಿಕಾರಿದರು.
ಸಮಿತಿಯ ಸುನಂದ ಜಯರಾಂ ಮತ್ತು ಎಂ.ಎಸ್. ಆತ್ಮಾನಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ತೆರವು ಮಾಡುವಂತೆ ಕೋರಿದರು. ಇದರಿಂದ ಹೋರಾಟಗಾರರ ಆಕ್ರೋಶ ಶಮನವಾಯಿತು.
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…