ಮಂಡ್ಯ

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಣ್ಣೇನಹಳ್ಳಿ ಕೈಗಾರಿಕಾ ಪ್ರದೇಶದ ಬೂಕನಕೆರೆ-ಡಿಂಕಾ-ಅಶೋಕನಗರ ಮಾರ್ಗದ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಕೆ.ಆರ್.ಪೇಟೆ ತಾಲ್ಲೂಕಿನ ಪಿ.ಬಿ.ಮಂಚನಹಳ್ಳಿ ಗ್ರಾಮದ ನಿವಾಸಿ ಪ್ರಜ್ವಲ್(19) ಮೃತ ಯುವಕನಾಗಿದ್ದಾರೆ. ಅದೇ ಕಾರಿನಲ್ಲಿ ಹೋಗುತ್ತಿದ್ದ ಪ್ರಜ್ವಲ್ ಸಂಬಂಧಿ ಕಾವ್ಯ(26) ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆ ವಿವರ
ಕಳೆದ ಒಂದು ತಿಂಗಳಿನಿಂದಲೂ ಈ ರಸ್ತೆಯಲ್ಲಿ ರೈತರು ನಿತ್ಯ ರಸ್ತೆಯಲ್ಲಿ ರಾಗಿ ಹುಲ್ಲು ಹಾಕಿ ಒಕ್ಕಣೆ ಮಾಡುತ್ತಿದ್ದರು. ಈ ಬಗ್ಗೆ ಹಲವು ಅಪಘಾತಗಳು ನಡೆದಿದ್ದರೂ ಸಹ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಇರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುವುದು ನಿರಂತರವಾಗಿ ನಡೆಯುತ್ತಿತ್ತು. ಇಂದೂ ಸಹ ಹಲವು ರೈತರು ರಸ್ತೆಯಲ್ಲಿ ರಾಗಿ ಹುಲ್ಲು ಹರಡಿ ಒಕ್ಕಣೆ ಮಾಡುತ್ತಿದ್ದ ಕಾರಣ ಮೃತ ಪ್ರಜ್ವಲ್ ಕಾರನ್ನು ಓಡಿಸಿಕೊಂಡು ಬರುತ್ತಿದ್ದಾಗ, ಚಾಲಕನ ನಿಯಣಂತ್ರಣ ತಪ್ಪಿದ ಕಾರು ಮಗುಚಿ ಬಿದ್ದಿದೆ. ಪರಿಣಾಮ ಪ್ರಜ್ವಲ್ ಅವರಿಗೆ ಗಂಭೀರವಾದ ಗಾಯಗಳುಂಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ರಜ್ವಲ್ ಹತ್ತಿರದ ಸಂಬಂಧಿ ಕಾವ್ಯ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಆನಂದೇಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿ ರಾಗಿ ಒಕ್ಕಣೆ ಮಾಡುತ್ತಿದ್ದ ಹಲವು ರೈತರ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ನಾಳೆಯಿಂದ ಯಾರಾದರೂ ರಸ್ತೆಯಲ್ಲಿ ಒಕ್ಕಣೆ ಮಾಡಿದರೆ ಸಾರ್ವಜನಿಕರು ಮಾಹಿತಿ ನೀಡಿದ್ದಲ್ಲಿ ತಕ್ಷಣ ಒಕ್ಕಣೆ ಮಾಡುವ ರೈತರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಆನಂದೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ ಎಚ್ಚರಿಕೆ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

12 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

15 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

17 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

17 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

22 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

22 hours ago