ಮಂಡ್ಯ

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಣ್ಣೇನಹಳ್ಳಿ ಕೈಗಾರಿಕಾ ಪ್ರದೇಶದ ಬೂಕನಕೆರೆ-ಡಿಂಕಾ-ಅಶೋಕನಗರ ಮಾರ್ಗದ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಕೆ.ಆರ್.ಪೇಟೆ ತಾಲ್ಲೂಕಿನ ಪಿ.ಬಿ.ಮಂಚನಹಳ್ಳಿ ಗ್ರಾಮದ ನಿವಾಸಿ ಪ್ರಜ್ವಲ್(19) ಮೃತ ಯುವಕನಾಗಿದ್ದಾರೆ. ಅದೇ ಕಾರಿನಲ್ಲಿ ಹೋಗುತ್ತಿದ್ದ ಪ್ರಜ್ವಲ್ ಸಂಬಂಧಿ ಕಾವ್ಯ(26) ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆ ವಿವರ
ಕಳೆದ ಒಂದು ತಿಂಗಳಿನಿಂದಲೂ ಈ ರಸ್ತೆಯಲ್ಲಿ ರೈತರು ನಿತ್ಯ ರಸ್ತೆಯಲ್ಲಿ ರಾಗಿ ಹುಲ್ಲು ಹಾಕಿ ಒಕ್ಕಣೆ ಮಾಡುತ್ತಿದ್ದರು. ಈ ಬಗ್ಗೆ ಹಲವು ಅಪಘಾತಗಳು ನಡೆದಿದ್ದರೂ ಸಹ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಇರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುವುದು ನಿರಂತರವಾಗಿ ನಡೆಯುತ್ತಿತ್ತು. ಇಂದೂ ಸಹ ಹಲವು ರೈತರು ರಸ್ತೆಯಲ್ಲಿ ರಾಗಿ ಹುಲ್ಲು ಹರಡಿ ಒಕ್ಕಣೆ ಮಾಡುತ್ತಿದ್ದ ಕಾರಣ ಮೃತ ಪ್ರಜ್ವಲ್ ಕಾರನ್ನು ಓಡಿಸಿಕೊಂಡು ಬರುತ್ತಿದ್ದಾಗ, ಚಾಲಕನ ನಿಯಣಂತ್ರಣ ತಪ್ಪಿದ ಕಾರು ಮಗುಚಿ ಬಿದ್ದಿದೆ. ಪರಿಣಾಮ ಪ್ರಜ್ವಲ್ ಅವರಿಗೆ ಗಂಭೀರವಾದ ಗಾಯಗಳುಂಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ರಜ್ವಲ್ ಹತ್ತಿರದ ಸಂಬಂಧಿ ಕಾವ್ಯ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಆನಂದೇಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿ ರಾಗಿ ಒಕ್ಕಣೆ ಮಾಡುತ್ತಿದ್ದ ಹಲವು ರೈತರ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ನಾಳೆಯಿಂದ ಯಾರಾದರೂ ರಸ್ತೆಯಲ್ಲಿ ಒಕ್ಕಣೆ ಮಾಡಿದರೆ ಸಾರ್ವಜನಿಕರು ಮಾಹಿತಿ ನೀಡಿದ್ದಲ್ಲಿ ತಕ್ಷಣ ಒಕ್ಕಣೆ ಮಾಡುವ ರೈತರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಆನಂದೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ ಎಚ್ಚರಿಕೆ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

2 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

2 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

2 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago