ಮಂಡ್ಯ

ಲಕ್ಷಾಂತರ ರೂ. ಮೌಲ್ಯದ ಪೆಟ್ರೋಲ್-ಡೀಸೆಲ್ ಅನ್ನು ನೆಲಕ್ಕೆ ಸುರಿದ ದುಷ್ಕರ್ಮಿಗಳು

ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ ಯಂತ್ರಗಳಿಂದ ಇಂಧನ ಹಾಕುವ ಪೈಪ್ ಅನ್ ಮಾಡಿ ಇಂಧನವನ್ನು ರಸ್ತೆಗೆ ಹರಿಬಿಟ್ಟಿದ್ದಾರೆ.

ಈ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ.ಪಾಂಡವಪುರ ತಾಲೂಕಿನ ಬೇಬಿ ಹಳ್ಳಿ ಬಳಿಯ ಎನ್. ಜಿ ಪೆಟ್ರೋಲ್ ಬಂಕ್‌ನ್ನು ಕಳೆದ ಶನಿವಾರ ರಾತ್ರಿ ಧ್ವಂಸ ಗೊಳಿಸಿದ್ದು, ಭಾನುವಾರ ಬೆಳಗ್ಗೆ ಸಿಬ್ಬಂದಿಗಳು ಕೆಲಸಕ್ಕೆಂದು ಬಂದಾಗ ಬೆಳಕಿಗೆ ಬಂದಿದೆ.

ಪೆಟ್ರೋಲ್ ಬಂಕ್ ನ ವಿದ್ಯುತ್ ಕೊಠಡಿಗೆ ಹಾಕಲಾಗಿದ್ದ ಬೀಗ ಒಡೆದು, ಸ್ಥಗಿತಗೊಳಿಸಲಾಗಿದ್ದ ಪಂಪ್‌ಗಳನ್ನು ಆನ್ ಮಾಡಲಾಗಿದೆ. ಎರಡೂ ಪಂಪ್‌ಗಳ ಪೆಟ್ರೋಲ್ ಹಾಗೂ ಡೀಸೆಲ್ ಗನ್‌ಗಳನ್ನು ನೆಲಕ್ಕೆ ಹಾಕಿ ಸುಮಾರು 10 ಸಾವಿರ ಲೀಟರ್‌ಗೂ ಅಧಿಕ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ನೆಲಕ್ಕೆ ಹರಿಸಲಾಗಿದೆ. ಅಂದಾಜು 10 ಲಕ್ಷ ರೂ.ಗಳಿಗೂ ಅಧಿಕ ನಷ್ಟ ಉಂಟಾಗುವಂತೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆ.ಆರ್. ಪೇಟೆಯ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಸ್ತಿ ರಂಗಪ್ಪ ಅವರು ಬಿ.ಎನ್.ಜಿ ಪೆಟ್ರೋಲ್ ಬಂಕ್ ಅನ್ನು ಕಳೆದ ಜೂ.29ರಂದು ಪ್ರಾರಂಭಿಸಿದ್ದರು.ಶನಿವಾರ ರಾತ್ರಿ ಕಾವಲಿನಲ್ಲಿದ್ದ ಇಬ್ಬರು ಸಿಬ್ಬಂದಿಗಳು ರಾತ್ರಿ ಊಟಕ್ಕೆಂದು ಸಮೀಪದ ಅರಳಕುಪ್ಪೆ ಗ್ರಾಮಕ್ಕೆ ತೆರಳಿದ್ದರು. ಅದೇ ಸಂದರ್ಭದಲ್ಲಿ ಮಳೆ ಬಂದಿದ್ದರಿಂದಾಗಿ, ಅವರು ಬೇಗನೇ ಪೆಟ್ರೋಲ್ ಬಂಕ್ ಗೆ ಮರಳಲು ಆಗಿರಲಿಲ್ಲ. ಈ ಸಂದರ್ಭವನ್ನು ಗಮನಿಸಿದ ದುಷ್ಕರ್ಮಿಗಳು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಇದೇ ವೇಳೆ ಪಂಪ್, ಶೌಚಾಲಯ ಹಾಗೂ ಸೇಲ್ಸ್ ರೂಮಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.

ಪೆಟ್ರೋಲ್ ಬಂಕ್ ನಲ್ಲಿ ಸಿಸಿ ಕ್ಯಾಮರಾ ಹಾಗೂ ರಾತ್ರಿ ಕಾವಲಿನ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿಯೇ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆಂದು ಹೇಳಲಾಗಿದೆ. ಈ ಕೃತ್ಯದ ಹಿಂದೆ ಕಾರಣ ಏನಿರಬಹುದು ಎಂಬ ಪ್ರಶ್ನೆಯ ಹಿಂದೆ ಬಿದ್ದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆಬೀಸಲಾಗಿದೆ. ಮೇಲ್ನೋಟಕ್ಕೆ, ಇತರ ಪೆಟ್ರೋಲ್ ಬಂಕ್ ನ ಮಾಲೀಕರು ವ್ಯಾಪಾರ ದ್ವೇಷದಿಂದಾಗಿ ಈ ಕೃತ್ಯವನ್ನು ಮಾಡಿಸಿರಬಹುದೇ ಎಂಬ ಅನುಮಾನಗಳೂ ಎದ್ದಿವೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ದುಷ್ಕರ್ಮಿಗಳ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ.

lokesh

Recent Posts

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…

36 mins ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

50 mins ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

2 hours ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

2 hours ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

2 hours ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

6 hours ago