ಮಂಡ್ಯ

ಲಕ್ಷಾಂತರ ರೂ. ಮೌಲ್ಯದ ಪೆಟ್ರೋಲ್-ಡೀಸೆಲ್ ಅನ್ನು ನೆಲಕ್ಕೆ ಸುರಿದ ದುಷ್ಕರ್ಮಿಗಳು

ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ ಯಂತ್ರಗಳಿಂದ ಇಂಧನ ಹಾಕುವ ಪೈಪ್ ಅನ್ ಮಾಡಿ ಇಂಧನವನ್ನು ರಸ್ತೆಗೆ ಹರಿಬಿಟ್ಟಿದ್ದಾರೆ.

ಈ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ.ಪಾಂಡವಪುರ ತಾಲೂಕಿನ ಬೇಬಿ ಹಳ್ಳಿ ಬಳಿಯ ಎನ್. ಜಿ ಪೆಟ್ರೋಲ್ ಬಂಕ್‌ನ್ನು ಕಳೆದ ಶನಿವಾರ ರಾತ್ರಿ ಧ್ವಂಸ ಗೊಳಿಸಿದ್ದು, ಭಾನುವಾರ ಬೆಳಗ್ಗೆ ಸಿಬ್ಬಂದಿಗಳು ಕೆಲಸಕ್ಕೆಂದು ಬಂದಾಗ ಬೆಳಕಿಗೆ ಬಂದಿದೆ.

ಪೆಟ್ರೋಲ್ ಬಂಕ್ ನ ವಿದ್ಯುತ್ ಕೊಠಡಿಗೆ ಹಾಕಲಾಗಿದ್ದ ಬೀಗ ಒಡೆದು, ಸ್ಥಗಿತಗೊಳಿಸಲಾಗಿದ್ದ ಪಂಪ್‌ಗಳನ್ನು ಆನ್ ಮಾಡಲಾಗಿದೆ. ಎರಡೂ ಪಂಪ್‌ಗಳ ಪೆಟ್ರೋಲ್ ಹಾಗೂ ಡೀಸೆಲ್ ಗನ್‌ಗಳನ್ನು ನೆಲಕ್ಕೆ ಹಾಕಿ ಸುಮಾರು 10 ಸಾವಿರ ಲೀಟರ್‌ಗೂ ಅಧಿಕ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ನೆಲಕ್ಕೆ ಹರಿಸಲಾಗಿದೆ. ಅಂದಾಜು 10 ಲಕ್ಷ ರೂ.ಗಳಿಗೂ ಅಧಿಕ ನಷ್ಟ ಉಂಟಾಗುವಂತೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆ.ಆರ್. ಪೇಟೆಯ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಸ್ತಿ ರಂಗಪ್ಪ ಅವರು ಬಿ.ಎನ್.ಜಿ ಪೆಟ್ರೋಲ್ ಬಂಕ್ ಅನ್ನು ಕಳೆದ ಜೂ.29ರಂದು ಪ್ರಾರಂಭಿಸಿದ್ದರು.ಶನಿವಾರ ರಾತ್ರಿ ಕಾವಲಿನಲ್ಲಿದ್ದ ಇಬ್ಬರು ಸಿಬ್ಬಂದಿಗಳು ರಾತ್ರಿ ಊಟಕ್ಕೆಂದು ಸಮೀಪದ ಅರಳಕುಪ್ಪೆ ಗ್ರಾಮಕ್ಕೆ ತೆರಳಿದ್ದರು. ಅದೇ ಸಂದರ್ಭದಲ್ಲಿ ಮಳೆ ಬಂದಿದ್ದರಿಂದಾಗಿ, ಅವರು ಬೇಗನೇ ಪೆಟ್ರೋಲ್ ಬಂಕ್ ಗೆ ಮರಳಲು ಆಗಿರಲಿಲ್ಲ. ಈ ಸಂದರ್ಭವನ್ನು ಗಮನಿಸಿದ ದುಷ್ಕರ್ಮಿಗಳು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಇದೇ ವೇಳೆ ಪಂಪ್, ಶೌಚಾಲಯ ಹಾಗೂ ಸೇಲ್ಸ್ ರೂಮಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.

ಪೆಟ್ರೋಲ್ ಬಂಕ್ ನಲ್ಲಿ ಸಿಸಿ ಕ್ಯಾಮರಾ ಹಾಗೂ ರಾತ್ರಿ ಕಾವಲಿನ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿಯೇ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆಂದು ಹೇಳಲಾಗಿದೆ. ಈ ಕೃತ್ಯದ ಹಿಂದೆ ಕಾರಣ ಏನಿರಬಹುದು ಎಂಬ ಪ್ರಶ್ನೆಯ ಹಿಂದೆ ಬಿದ್ದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆಬೀಸಲಾಗಿದೆ. ಮೇಲ್ನೋಟಕ್ಕೆ, ಇತರ ಪೆಟ್ರೋಲ್ ಬಂಕ್ ನ ಮಾಲೀಕರು ವ್ಯಾಪಾರ ದ್ವೇಷದಿಂದಾಗಿ ಈ ಕೃತ್ಯವನ್ನು ಮಾಡಿಸಿರಬಹುದೇ ಎಂಬ ಅನುಮಾನಗಳೂ ಎದ್ದಿವೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ದುಷ್ಕರ್ಮಿಗಳ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ.

lokesh

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

6 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

8 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

9 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

9 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

9 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

9 hours ago