ಮಂಡ್ಯ

ಲಕ್ಷಾಂತರ ರೂ. ಮೌಲ್ಯದ ಪೆಟ್ರೋಲ್-ಡೀಸೆಲ್ ಅನ್ನು ನೆಲಕ್ಕೆ ಸುರಿದ ದುಷ್ಕರ್ಮಿಗಳು

ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ ಯಂತ್ರಗಳಿಂದ ಇಂಧನ ಹಾಕುವ ಪೈಪ್ ಅನ್ ಮಾಡಿ ಇಂಧನವನ್ನು ರಸ್ತೆಗೆ ಹರಿಬಿಟ್ಟಿದ್ದಾರೆ.

ಈ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ.ಪಾಂಡವಪುರ ತಾಲೂಕಿನ ಬೇಬಿ ಹಳ್ಳಿ ಬಳಿಯ ಎನ್. ಜಿ ಪೆಟ್ರೋಲ್ ಬಂಕ್‌ನ್ನು ಕಳೆದ ಶನಿವಾರ ರಾತ್ರಿ ಧ್ವಂಸ ಗೊಳಿಸಿದ್ದು, ಭಾನುವಾರ ಬೆಳಗ್ಗೆ ಸಿಬ್ಬಂದಿಗಳು ಕೆಲಸಕ್ಕೆಂದು ಬಂದಾಗ ಬೆಳಕಿಗೆ ಬಂದಿದೆ.

ಪೆಟ್ರೋಲ್ ಬಂಕ್ ನ ವಿದ್ಯುತ್ ಕೊಠಡಿಗೆ ಹಾಕಲಾಗಿದ್ದ ಬೀಗ ಒಡೆದು, ಸ್ಥಗಿತಗೊಳಿಸಲಾಗಿದ್ದ ಪಂಪ್‌ಗಳನ್ನು ಆನ್ ಮಾಡಲಾಗಿದೆ. ಎರಡೂ ಪಂಪ್‌ಗಳ ಪೆಟ್ರೋಲ್ ಹಾಗೂ ಡೀಸೆಲ್ ಗನ್‌ಗಳನ್ನು ನೆಲಕ್ಕೆ ಹಾಕಿ ಸುಮಾರು 10 ಸಾವಿರ ಲೀಟರ್‌ಗೂ ಅಧಿಕ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ನೆಲಕ್ಕೆ ಹರಿಸಲಾಗಿದೆ. ಅಂದಾಜು 10 ಲಕ್ಷ ರೂ.ಗಳಿಗೂ ಅಧಿಕ ನಷ್ಟ ಉಂಟಾಗುವಂತೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆ.ಆರ್. ಪೇಟೆಯ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಸ್ತಿ ರಂಗಪ್ಪ ಅವರು ಬಿ.ಎನ್.ಜಿ ಪೆಟ್ರೋಲ್ ಬಂಕ್ ಅನ್ನು ಕಳೆದ ಜೂ.29ರಂದು ಪ್ರಾರಂಭಿಸಿದ್ದರು.ಶನಿವಾರ ರಾತ್ರಿ ಕಾವಲಿನಲ್ಲಿದ್ದ ಇಬ್ಬರು ಸಿಬ್ಬಂದಿಗಳು ರಾತ್ರಿ ಊಟಕ್ಕೆಂದು ಸಮೀಪದ ಅರಳಕುಪ್ಪೆ ಗ್ರಾಮಕ್ಕೆ ತೆರಳಿದ್ದರು. ಅದೇ ಸಂದರ್ಭದಲ್ಲಿ ಮಳೆ ಬಂದಿದ್ದರಿಂದಾಗಿ, ಅವರು ಬೇಗನೇ ಪೆಟ್ರೋಲ್ ಬಂಕ್ ಗೆ ಮರಳಲು ಆಗಿರಲಿಲ್ಲ. ಈ ಸಂದರ್ಭವನ್ನು ಗಮನಿಸಿದ ದುಷ್ಕರ್ಮಿಗಳು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಇದೇ ವೇಳೆ ಪಂಪ್, ಶೌಚಾಲಯ ಹಾಗೂ ಸೇಲ್ಸ್ ರೂಮಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.

ಪೆಟ್ರೋಲ್ ಬಂಕ್ ನಲ್ಲಿ ಸಿಸಿ ಕ್ಯಾಮರಾ ಹಾಗೂ ರಾತ್ರಿ ಕಾವಲಿನ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿಯೇ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆಂದು ಹೇಳಲಾಗಿದೆ. ಈ ಕೃತ್ಯದ ಹಿಂದೆ ಕಾರಣ ಏನಿರಬಹುದು ಎಂಬ ಪ್ರಶ್ನೆಯ ಹಿಂದೆ ಬಿದ್ದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆಬೀಸಲಾಗಿದೆ. ಮೇಲ್ನೋಟಕ್ಕೆ, ಇತರ ಪೆಟ್ರೋಲ್ ಬಂಕ್ ನ ಮಾಲೀಕರು ವ್ಯಾಪಾರ ದ್ವೇಷದಿಂದಾಗಿ ಈ ಕೃತ್ಯವನ್ನು ಮಾಡಿಸಿರಬಹುದೇ ಎಂಬ ಅನುಮಾನಗಳೂ ಎದ್ದಿವೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ದುಷ್ಕರ್ಮಿಗಳ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ.

lokesh

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

11 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

12 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

14 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

14 hours ago