ಮಂಡ್ಯ

ಲಕ್ಷಾಂತರ ರೂ. ಮೌಲ್ಯದ ಪೆಟ್ರೋಲ್-ಡೀಸೆಲ್ ಅನ್ನು ನೆಲಕ್ಕೆ ಸುರಿದ ದುಷ್ಕರ್ಮಿಗಳು

ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ ಯಂತ್ರಗಳಿಂದ ಇಂಧನ ಹಾಕುವ ಪೈಪ್ ಅನ್ ಮಾಡಿ ಇಂಧನವನ್ನು ರಸ್ತೆಗೆ ಹರಿಬಿಟ್ಟಿದ್ದಾರೆ.

ಈ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ.ಪಾಂಡವಪುರ ತಾಲೂಕಿನ ಬೇಬಿ ಹಳ್ಳಿ ಬಳಿಯ ಎನ್. ಜಿ ಪೆಟ್ರೋಲ್ ಬಂಕ್‌ನ್ನು ಕಳೆದ ಶನಿವಾರ ರಾತ್ರಿ ಧ್ವಂಸ ಗೊಳಿಸಿದ್ದು, ಭಾನುವಾರ ಬೆಳಗ್ಗೆ ಸಿಬ್ಬಂದಿಗಳು ಕೆಲಸಕ್ಕೆಂದು ಬಂದಾಗ ಬೆಳಕಿಗೆ ಬಂದಿದೆ.

ಪೆಟ್ರೋಲ್ ಬಂಕ್ ನ ವಿದ್ಯುತ್ ಕೊಠಡಿಗೆ ಹಾಕಲಾಗಿದ್ದ ಬೀಗ ಒಡೆದು, ಸ್ಥಗಿತಗೊಳಿಸಲಾಗಿದ್ದ ಪಂಪ್‌ಗಳನ್ನು ಆನ್ ಮಾಡಲಾಗಿದೆ. ಎರಡೂ ಪಂಪ್‌ಗಳ ಪೆಟ್ರೋಲ್ ಹಾಗೂ ಡೀಸೆಲ್ ಗನ್‌ಗಳನ್ನು ನೆಲಕ್ಕೆ ಹಾಕಿ ಸುಮಾರು 10 ಸಾವಿರ ಲೀಟರ್‌ಗೂ ಅಧಿಕ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ನೆಲಕ್ಕೆ ಹರಿಸಲಾಗಿದೆ. ಅಂದಾಜು 10 ಲಕ್ಷ ರೂ.ಗಳಿಗೂ ಅಧಿಕ ನಷ್ಟ ಉಂಟಾಗುವಂತೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆ.ಆರ್. ಪೇಟೆಯ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಸ್ತಿ ರಂಗಪ್ಪ ಅವರು ಬಿ.ಎನ್.ಜಿ ಪೆಟ್ರೋಲ್ ಬಂಕ್ ಅನ್ನು ಕಳೆದ ಜೂ.29ರಂದು ಪ್ರಾರಂಭಿಸಿದ್ದರು.ಶನಿವಾರ ರಾತ್ರಿ ಕಾವಲಿನಲ್ಲಿದ್ದ ಇಬ್ಬರು ಸಿಬ್ಬಂದಿಗಳು ರಾತ್ರಿ ಊಟಕ್ಕೆಂದು ಸಮೀಪದ ಅರಳಕುಪ್ಪೆ ಗ್ರಾಮಕ್ಕೆ ತೆರಳಿದ್ದರು. ಅದೇ ಸಂದರ್ಭದಲ್ಲಿ ಮಳೆ ಬಂದಿದ್ದರಿಂದಾಗಿ, ಅವರು ಬೇಗನೇ ಪೆಟ್ರೋಲ್ ಬಂಕ್ ಗೆ ಮರಳಲು ಆಗಿರಲಿಲ್ಲ. ಈ ಸಂದರ್ಭವನ್ನು ಗಮನಿಸಿದ ದುಷ್ಕರ್ಮಿಗಳು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಇದೇ ವೇಳೆ ಪಂಪ್, ಶೌಚಾಲಯ ಹಾಗೂ ಸೇಲ್ಸ್ ರೂಮಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.

ಪೆಟ್ರೋಲ್ ಬಂಕ್ ನಲ್ಲಿ ಸಿಸಿ ಕ್ಯಾಮರಾ ಹಾಗೂ ರಾತ್ರಿ ಕಾವಲಿನ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿಯೇ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆಂದು ಹೇಳಲಾಗಿದೆ. ಈ ಕೃತ್ಯದ ಹಿಂದೆ ಕಾರಣ ಏನಿರಬಹುದು ಎಂಬ ಪ್ರಶ್ನೆಯ ಹಿಂದೆ ಬಿದ್ದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆಬೀಸಲಾಗಿದೆ. ಮೇಲ್ನೋಟಕ್ಕೆ, ಇತರ ಪೆಟ್ರೋಲ್ ಬಂಕ್ ನ ಮಾಲೀಕರು ವ್ಯಾಪಾರ ದ್ವೇಷದಿಂದಾಗಿ ಈ ಕೃತ್ಯವನ್ನು ಮಾಡಿಸಿರಬಹುದೇ ಎಂಬ ಅನುಮಾನಗಳೂ ಎದ್ದಿವೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ದುಷ್ಕರ್ಮಿಗಳ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ.

lokesh

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

3 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

3 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

3 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

3 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

3 hours ago