ಮಂಡ್ಯ

ವೈದ್ಯರ ಪ್ರತಿಷ್ಠೆಯಿಂದ ಮಿಮ್ಸ್ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ: ಜಿಲ್ಲಾಧಿಕಾರಿ ಬೇಸರ

ಮಂಡ್ಯ : ರೋಗಿಗಳ ಜೀವ ಉಳಿಸಲು ತುರ್ತಾಗಿ ರಕ್ತ ಬೇಕಿರುತ್ತದೆ. ರಕ್ತನಿಧಿ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ, ರೋಗಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಿಸಬೇಕಾಗಬಹುದು. ರಕ್ತನಿಧಿ ಕೇಂದ್ರದ ಅಧಿಕಾರಿಗಳು ರೋಗಿಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಖಡಕ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಿಮ್ಸ್ ವೈದ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರು ವೈದ್ಯರಿಗೆ ದೇವರ ಸ್ಥಾನ ನೀಡುತ್ತಾರೆ. ವೈದ್ಯರ ಸ್ವ ಪ್ರತಿಷ್ಠೆಯಿಂದ ಮಿಮ್ಸ್‌ನ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಹಾಗೂ ರೋಗಿಗಳಿಗೆ ರಕ್ತ ದೊರಕುತ್ತಿಲ್ಲ. ರಕ್ತ ದಾನ ಶಿಬಿರಗಳು ಜಿಲ್ಲೆಯಲ್ಲಿ ನಡೆಯುತ್ತಿಲ್ಲ ಎಂದರೆ ತಲೆ ತಗ್ಗಿಸಬೇಕಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಈ ಹಿಂದೆ ಹಲವಾರು ರಕ್ತದಾನ ಶಿಬಿರಗಳನ್ನು ಆಯೋಜಿಸಿ ರಕ್ತ ಸಂಗ್ರಹಿಸಿ ಅವಶ್ಯವಿದ್ದಾಗ ಬೇರೆ ಜಿಲ್ಲೆಗೆ ನೀಡಲಾಗಿತ್ತಿತ್ತು. ಇಂದು ಮಿಮ್ಸ್‌ಗೆ ಬರುವ ರೋಗಿಗಳು ಖಾಸಗಿ ರಕ್ತನಿಧಿ ಕೇಂದ್ರದಿಂದ ರಕ್ತ ತರಬೇಕೆಂದರೆ ಬಡವರಿಗೆ ಕಷ್ಟವಾಗುತ್ತದೆ. ಮಿಮ್ಸ್‌ಗೆ ಬರುವ ರೋಗಿಗಳು ಬಡವರು ಎಂಬುದನ್ನು ಮರೆಯಬೇಡಿ. ಮಾನವೀಯತೆ ಹಾಗೂ ಹೃದಯವಂತಿಕೆಯನ್ನು ರೂಢಿಸಿಕೊಂಡು ಕೆಲಸ ನಿರ್ವಹಿಸಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ. ಮಿಮ್ಸ್‌ನ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ರಕ್ತಕ್ಕೆ ಕೃತಕ ಬೇಡಿಕೆ ಸೃಷ್ಟಿಯಾಗಿ ಹಲವಾರು ತೊಂದರೆ ಉಂಟಾಗುತ್ತದೆ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಮಿಮ್ಸ್‌ನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದು ನಿರ್ದೇಶನ ನೀಡಿದರು.

ಮಿಮ್ಸ್ ರಕ್ತನಿಧಿ ಕೇಂದ್ರದಲ್ಲಿ ಉಂಟಾಗಿರುವ ತೊಂದರೆಯನ್ನು ಕೂಡಲೇ ಸರಿದೂಗಿಸಬೇಕು. ಈ ಹಿಂದೆ ರಕ್ತನಿಧಿ ಕೇಂದ್ರ ನಡಯುತ್ತಿದ್ದ ರೀತಿಯಲ್ಲಿ ನಡೆಯಬೇಕು. ಇದಕ್ಕೆ ಸಂಬಂಧಿಸಿದಂತೆ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ ಅವರಿಗೆ ಸೂಚನೆ ನೀಡಿದರು.

ರಕ್ತನಿಧಿ ಕೇಂದ್ರದಲ್ಲಿ ರಕ್ತದ ಯುನಿಟ್‌ಗಳನ್ನು ಹೆಚ್ಚಿಸಲು ರೆಡ್‌ಕ್ರಾಸ್ ಸಂಸ್ಥೆಯೊಂದಿಗೆ ಶಿಬಿರಗಳನ್ನು ಆಯೋಜಿಸಬೇಕು. ಪ್ರತಿದಿನ ರಕ್ತನಿಧಿ ಕೇಂದ್ರದ ಕಾರ್ಯನಿರ್ವಹಣೆಯನ್ನು ನಿಯಮಿತವಾಗಿ ಮಿಮ್ಸ್ ವೈದ್ಯಕೀಯ ಅಧಿಕ್ಷಕ ಡಾ ಶಿವಕುಮಾರ್ ಅವರು ಪರಿಶೀಲನೆ ನಡೆಸಬೇಕು ಎಂದು ಆದೇಶಿಸಿದರು.

ರಕ್ತನಿಧಿ ಕೇಂದ್ರಕ್ಕೆ ಸಂಬಂಧಿಸಿದಂತೆ ದೂರುಗಳು ಕೇಳಿಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೆಡ್‌ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಮಿಮ್ಸ್ ಪೆಥಾಲಜಿ, ರಕ್ತ ನಿಧಿ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

6 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

6 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

7 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

8 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

10 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

12 hours ago