MIMS Blood Bank Center
ಮಂಡ್ಯ : ರೋಗಿಗಳ ಜೀವ ಉಳಿಸಲು ತುರ್ತಾಗಿ ರಕ್ತ ಬೇಕಿರುತ್ತದೆ. ರಕ್ತನಿಧಿ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ, ರೋಗಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಿಸಬೇಕಾಗಬಹುದು. ರಕ್ತನಿಧಿ ಕೇಂದ್ರದ ಅಧಿಕಾರಿಗಳು ರೋಗಿಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಖಡಕ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಿಮ್ಸ್ ವೈದ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರು ವೈದ್ಯರಿಗೆ ದೇವರ ಸ್ಥಾನ ನೀಡುತ್ತಾರೆ. ವೈದ್ಯರ ಸ್ವ ಪ್ರತಿಷ್ಠೆಯಿಂದ ಮಿಮ್ಸ್ನ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಹಾಗೂ ರೋಗಿಗಳಿಗೆ ರಕ್ತ ದೊರಕುತ್ತಿಲ್ಲ. ರಕ್ತ ದಾನ ಶಿಬಿರಗಳು ಜಿಲ್ಲೆಯಲ್ಲಿ ನಡೆಯುತ್ತಿಲ್ಲ ಎಂದರೆ ತಲೆ ತಗ್ಗಿಸಬೇಕಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಈ ಹಿಂದೆ ಹಲವಾರು ರಕ್ತದಾನ ಶಿಬಿರಗಳನ್ನು ಆಯೋಜಿಸಿ ರಕ್ತ ಸಂಗ್ರಹಿಸಿ ಅವಶ್ಯವಿದ್ದಾಗ ಬೇರೆ ಜಿಲ್ಲೆಗೆ ನೀಡಲಾಗಿತ್ತಿತ್ತು. ಇಂದು ಮಿಮ್ಸ್ಗೆ ಬರುವ ರೋಗಿಗಳು ಖಾಸಗಿ ರಕ್ತನಿಧಿ ಕೇಂದ್ರದಿಂದ ರಕ್ತ ತರಬೇಕೆಂದರೆ ಬಡವರಿಗೆ ಕಷ್ಟವಾಗುತ್ತದೆ. ಮಿಮ್ಸ್ಗೆ ಬರುವ ರೋಗಿಗಳು ಬಡವರು ಎಂಬುದನ್ನು ಮರೆಯಬೇಡಿ. ಮಾನವೀಯತೆ ಹಾಗೂ ಹೃದಯವಂತಿಕೆಯನ್ನು ರೂಢಿಸಿಕೊಂಡು ಕೆಲಸ ನಿರ್ವಹಿಸಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ. ಮಿಮ್ಸ್ನ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ರಕ್ತಕ್ಕೆ ಕೃತಕ ಬೇಡಿಕೆ ಸೃಷ್ಟಿಯಾಗಿ ಹಲವಾರು ತೊಂದರೆ ಉಂಟಾಗುತ್ತದೆ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಮಿಮ್ಸ್ನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದು ನಿರ್ದೇಶನ ನೀಡಿದರು.
ಮಿಮ್ಸ್ ರಕ್ತನಿಧಿ ಕೇಂದ್ರದಲ್ಲಿ ಉಂಟಾಗಿರುವ ತೊಂದರೆಯನ್ನು ಕೂಡಲೇ ಸರಿದೂಗಿಸಬೇಕು. ಈ ಹಿಂದೆ ರಕ್ತನಿಧಿ ಕೇಂದ್ರ ನಡಯುತ್ತಿದ್ದ ರೀತಿಯಲ್ಲಿ ನಡೆಯಬೇಕು. ಇದಕ್ಕೆ ಸಂಬಂಧಿಸಿದಂತೆ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ ಅವರಿಗೆ ಸೂಚನೆ ನೀಡಿದರು.
ರಕ್ತನಿಧಿ ಕೇಂದ್ರದಲ್ಲಿ ರಕ್ತದ ಯುನಿಟ್ಗಳನ್ನು ಹೆಚ್ಚಿಸಲು ರೆಡ್ಕ್ರಾಸ್ ಸಂಸ್ಥೆಯೊಂದಿಗೆ ಶಿಬಿರಗಳನ್ನು ಆಯೋಜಿಸಬೇಕು. ಪ್ರತಿದಿನ ರಕ್ತನಿಧಿ ಕೇಂದ್ರದ ಕಾರ್ಯನಿರ್ವಹಣೆಯನ್ನು ನಿಯಮಿತವಾಗಿ ಮಿಮ್ಸ್ ವೈದ್ಯಕೀಯ ಅಧಿಕ್ಷಕ ಡಾ ಶಿವಕುಮಾರ್ ಅವರು ಪರಿಶೀಲನೆ ನಡೆಸಬೇಕು ಎಂದು ಆದೇಶಿಸಿದರು.
ರಕ್ತನಿಧಿ ಕೇಂದ್ರಕ್ಕೆ ಸಂಬಂಧಿಸಿದಂತೆ ದೂರುಗಳು ಕೇಳಿಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೆಡ್ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಮಿಮ್ಸ್ ಪೆಥಾಲಜಿ, ರಕ್ತ ನಿಧಿ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…