ಮಂಡ್ಯ

ವೈದ್ಯರ ಪ್ರತಿಷ್ಠೆಯಿಂದ ಮಿಮ್ಸ್ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ: ಜಿಲ್ಲಾಧಿಕಾರಿ ಬೇಸರ

ಮಂಡ್ಯ : ರೋಗಿಗಳ ಜೀವ ಉಳಿಸಲು ತುರ್ತಾಗಿ ರಕ್ತ ಬೇಕಿರುತ್ತದೆ. ರಕ್ತನಿಧಿ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ, ರೋಗಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಿಸಬೇಕಾಗಬಹುದು. ರಕ್ತನಿಧಿ ಕೇಂದ್ರದ ಅಧಿಕಾರಿಗಳು ರೋಗಿಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಖಡಕ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಿಮ್ಸ್ ವೈದ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರು ವೈದ್ಯರಿಗೆ ದೇವರ ಸ್ಥಾನ ನೀಡುತ್ತಾರೆ. ವೈದ್ಯರ ಸ್ವ ಪ್ರತಿಷ್ಠೆಯಿಂದ ಮಿಮ್ಸ್‌ನ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಹಾಗೂ ರೋಗಿಗಳಿಗೆ ರಕ್ತ ದೊರಕುತ್ತಿಲ್ಲ. ರಕ್ತ ದಾನ ಶಿಬಿರಗಳು ಜಿಲ್ಲೆಯಲ್ಲಿ ನಡೆಯುತ್ತಿಲ್ಲ ಎಂದರೆ ತಲೆ ತಗ್ಗಿಸಬೇಕಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಈ ಹಿಂದೆ ಹಲವಾರು ರಕ್ತದಾನ ಶಿಬಿರಗಳನ್ನು ಆಯೋಜಿಸಿ ರಕ್ತ ಸಂಗ್ರಹಿಸಿ ಅವಶ್ಯವಿದ್ದಾಗ ಬೇರೆ ಜಿಲ್ಲೆಗೆ ನೀಡಲಾಗಿತ್ತಿತ್ತು. ಇಂದು ಮಿಮ್ಸ್‌ಗೆ ಬರುವ ರೋಗಿಗಳು ಖಾಸಗಿ ರಕ್ತನಿಧಿ ಕೇಂದ್ರದಿಂದ ರಕ್ತ ತರಬೇಕೆಂದರೆ ಬಡವರಿಗೆ ಕಷ್ಟವಾಗುತ್ತದೆ. ಮಿಮ್ಸ್‌ಗೆ ಬರುವ ರೋಗಿಗಳು ಬಡವರು ಎಂಬುದನ್ನು ಮರೆಯಬೇಡಿ. ಮಾನವೀಯತೆ ಹಾಗೂ ಹೃದಯವಂತಿಕೆಯನ್ನು ರೂಢಿಸಿಕೊಂಡು ಕೆಲಸ ನಿರ್ವಹಿಸಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ. ಮಿಮ್ಸ್‌ನ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ರಕ್ತಕ್ಕೆ ಕೃತಕ ಬೇಡಿಕೆ ಸೃಷ್ಟಿಯಾಗಿ ಹಲವಾರು ತೊಂದರೆ ಉಂಟಾಗುತ್ತದೆ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಮಿಮ್ಸ್‌ನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದು ನಿರ್ದೇಶನ ನೀಡಿದರು.

ಮಿಮ್ಸ್ ರಕ್ತನಿಧಿ ಕೇಂದ್ರದಲ್ಲಿ ಉಂಟಾಗಿರುವ ತೊಂದರೆಯನ್ನು ಕೂಡಲೇ ಸರಿದೂಗಿಸಬೇಕು. ಈ ಹಿಂದೆ ರಕ್ತನಿಧಿ ಕೇಂದ್ರ ನಡಯುತ್ತಿದ್ದ ರೀತಿಯಲ್ಲಿ ನಡೆಯಬೇಕು. ಇದಕ್ಕೆ ಸಂಬಂಧಿಸಿದಂತೆ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ ಅವರಿಗೆ ಸೂಚನೆ ನೀಡಿದರು.

ರಕ್ತನಿಧಿ ಕೇಂದ್ರದಲ್ಲಿ ರಕ್ತದ ಯುನಿಟ್‌ಗಳನ್ನು ಹೆಚ್ಚಿಸಲು ರೆಡ್‌ಕ್ರಾಸ್ ಸಂಸ್ಥೆಯೊಂದಿಗೆ ಶಿಬಿರಗಳನ್ನು ಆಯೋಜಿಸಬೇಕು. ಪ್ರತಿದಿನ ರಕ್ತನಿಧಿ ಕೇಂದ್ರದ ಕಾರ್ಯನಿರ್ವಹಣೆಯನ್ನು ನಿಯಮಿತವಾಗಿ ಮಿಮ್ಸ್ ವೈದ್ಯಕೀಯ ಅಧಿಕ್ಷಕ ಡಾ ಶಿವಕುಮಾರ್ ಅವರು ಪರಿಶೀಲನೆ ನಡೆಸಬೇಕು ಎಂದು ಆದೇಶಿಸಿದರು.

ರಕ್ತನಿಧಿ ಕೇಂದ್ರಕ್ಕೆ ಸಂಬಂಧಿಸಿದಂತೆ ದೂರುಗಳು ಕೇಳಿಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೆಡ್‌ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಮಿಮ್ಸ್ ಪೆಥಾಲಜಿ, ರಕ್ತ ನಿಧಿ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

21 mins ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

41 mins ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

1 hour ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

2 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

2 hours ago

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

4 hours ago