ಮಂಡ್ಯ

ಗಣಿಗಾರಿಕೆ ಸ್ಫೋಟದಿಂದ ವಿ.ಸಿ ಸುರಂಗ ಕಾಲುವಿಗೆ ಅಪಾಯ : ಸ್ಥಳ ಪರಿಶೀಲಿಸಿದ ಅಧಿಕಾರಿಗಳು

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನನಕೆರೆ ಮತ್ತು ಆಲಗೂಡು ಗ್ರಾಮಗಳ ನಡುವಿನ ವಿ.ಸಿ.ನಾಲೆ ಸಂಪರ್ಕ ಸುರಂಗ ನಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ತಲೆ ಎತ್ತಿರುವ ಗಣಿಗಾರಿಕೆಗಳ ಸ್ಛೋಟದಿಂದಾಗಿ ಅಪಾಯವಾಗಲಿದೆ ಎಂಬ ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆ ಅಽಕಾರಗಳ ತಂಡ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ನೀರಾವರಿ ನಿಗಮದ ಎಕ್ಸಿಕ್ಯೂಟಿವ್ ಇಂಜಿನಿಯರ್ ವಾಸುದೇವ ನೀಡಿರುವ ದೂರಿನನ್ವಯ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಗಣಿ ಮತ್ತು ಭೂ ವಿಜ್ಞಾನದ ಹಿರಿಯ ಅಽಕಾರಿ ಪುಷ್ಪ ನೇತೃತ್ವದ ತಂಡ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತು.

ಸುರಂಗ ನಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ಕ್ರಷರ್ ಮತ್ತು ಕ್ವಾರಿಗಳ ದಾಖಲಾತಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಕ್ವಾರಿಗಳಲ್ಲಿ ಬ್ಲಾಸ್ಟಿಂಗ್ ನಡೆಸುತ್ತಿರುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಇದನ್ನು ಓದಿ : ಚಾಮರಾಜನಗರ| ಅಕ್ರಮ ಗಣಿಗಾರಿಕೆ ವಿರುದ್ಧ ಅನ್ನದಾತರ ಆಕ್ರೋಶ

ಎಕ್ಸಿಕ್ಯುಟಿವ್ ಇಂಜಿನಿಯರ್ ವಾಸುದೇವ ಮಾತನಾಡಿ, ಈ ಭಾಗದಲ್ಲಿ ಸುಮಾರು ೧.೩ ಕಿ.ಮೀ. ವರೆಗೂ ಸುರಂಗದ ಮೂಲಕವೇ ಹಾದು ಹೋಗುವ ವಿ.ಸಿ. ಸಂಪರ್ಕ ನಾಲೆಯು ಸುಮಾರು ೭೦ ಸಾವಿರ ಎಕರೆ ಪ್ರದೇಶದ ಜಮೀನುಗಳ ಕೃಷಿ ಚಟುವಟಿಕೆಗಳಿಗೆ ಆಧಾರಸ್ತಂಬವಾಗಿದೆ. ಇಲ್ಲಿನ ಕ್ವಾರಿ ಮತ್ತು ಕ್ರಷರ್‌ಗಳಲ್ಲಿ ನಡೆಯುತ್ತಿರುವ ಸ್ಛೋಟದಿಂದ ಸುರಂಗ ಕುಸಿಯುವ ಸಾಧ್ಯತೆಯಿದೆ. ಹಾಗಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ನೀಡಲಾಗಿದ್ದು, ನಾಲೆಯ ರಕ್ಷಣೆಗಾಗಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ ಮಾತನಾಡಿ, ಈ ಭಾಗದಲ್ಲಿ ಪ್ರಭಾವಿಗಳು ಹಾಗೂ ರಾಜಕೀಯ ನಾಯಕರ ಹಿಂಬಾಲಕರು ಕ್ರಷರ್ ಮತ್ತು ಕ್ವಾರಿಗಳನ್ನು ನಡೆಸುತ್ತಿದ್ದು, ಎಗ್ಗಿಲ್ಲದೆ ಬ್ಲಾಸ್ಟಿಂಗ್ ಮಾಡುವ ಮೂಲಕ ಸುರಂಗದ ನಾಲೆಗೆ ಕಂಟಕವಾಗಿದೆ. ಅಽಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ನಾಲೆಯ ಸಂರಕ್ಷಣೆಗೆ ಮುಂದಾಗುವುದರ ಜತೆಗೆ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಸ್ಥಳೀಯರಾದ ಗಂಜಾಂ ರವಿಚಂದ್ರ, ಕಾಳೇನಹಳ್ಳಿ ಮಹೇಶ್, ಕೋಡಿಶೆಟ್ಟಿಪುರ ತೇಜಸ್, ಅಲ್ಲಾಪಟ್ಟಣ ಸಿದ್ದೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

7 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

10 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

10 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

12 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

13 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

14 hours ago