ಮಂಡ್ಯ

ಗಣಿಗಾರಿಕೆ ಸ್ಫೋಟದಿಂದ ವಿ.ಸಿ ಸುರಂಗ ಕಾಲುವಿಗೆ ಅಪಾಯ : ಸ್ಥಳ ಪರಿಶೀಲಿಸಿದ ಅಧಿಕಾರಿಗಳು

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನನಕೆರೆ ಮತ್ತು ಆಲಗೂಡು ಗ್ರಾಮಗಳ ನಡುವಿನ ವಿ.ಸಿ.ನಾಲೆ ಸಂಪರ್ಕ ಸುರಂಗ ನಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ತಲೆ ಎತ್ತಿರುವ ಗಣಿಗಾರಿಕೆಗಳ ಸ್ಛೋಟದಿಂದಾಗಿ ಅಪಾಯವಾಗಲಿದೆ ಎಂಬ ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆ ಅಽಕಾರಗಳ ತಂಡ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ನೀರಾವರಿ ನಿಗಮದ ಎಕ್ಸಿಕ್ಯೂಟಿವ್ ಇಂಜಿನಿಯರ್ ವಾಸುದೇವ ನೀಡಿರುವ ದೂರಿನನ್ವಯ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಗಣಿ ಮತ್ತು ಭೂ ವಿಜ್ಞಾನದ ಹಿರಿಯ ಅಽಕಾರಿ ಪುಷ್ಪ ನೇತೃತ್ವದ ತಂಡ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತು.

ಸುರಂಗ ನಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ಕ್ರಷರ್ ಮತ್ತು ಕ್ವಾರಿಗಳ ದಾಖಲಾತಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಕ್ವಾರಿಗಳಲ್ಲಿ ಬ್ಲಾಸ್ಟಿಂಗ್ ನಡೆಸುತ್ತಿರುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಇದನ್ನು ಓದಿ : ಚಾಮರಾಜನಗರ| ಅಕ್ರಮ ಗಣಿಗಾರಿಕೆ ವಿರುದ್ಧ ಅನ್ನದಾತರ ಆಕ್ರೋಶ

ಎಕ್ಸಿಕ್ಯುಟಿವ್ ಇಂಜಿನಿಯರ್ ವಾಸುದೇವ ಮಾತನಾಡಿ, ಈ ಭಾಗದಲ್ಲಿ ಸುಮಾರು ೧.೩ ಕಿ.ಮೀ. ವರೆಗೂ ಸುರಂಗದ ಮೂಲಕವೇ ಹಾದು ಹೋಗುವ ವಿ.ಸಿ. ಸಂಪರ್ಕ ನಾಲೆಯು ಸುಮಾರು ೭೦ ಸಾವಿರ ಎಕರೆ ಪ್ರದೇಶದ ಜಮೀನುಗಳ ಕೃಷಿ ಚಟುವಟಿಕೆಗಳಿಗೆ ಆಧಾರಸ್ತಂಬವಾಗಿದೆ. ಇಲ್ಲಿನ ಕ್ವಾರಿ ಮತ್ತು ಕ್ರಷರ್‌ಗಳಲ್ಲಿ ನಡೆಯುತ್ತಿರುವ ಸ್ಛೋಟದಿಂದ ಸುರಂಗ ಕುಸಿಯುವ ಸಾಧ್ಯತೆಯಿದೆ. ಹಾಗಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ನೀಡಲಾಗಿದ್ದು, ನಾಲೆಯ ರಕ್ಷಣೆಗಾಗಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ ಮಾತನಾಡಿ, ಈ ಭಾಗದಲ್ಲಿ ಪ್ರಭಾವಿಗಳು ಹಾಗೂ ರಾಜಕೀಯ ನಾಯಕರ ಹಿಂಬಾಲಕರು ಕ್ರಷರ್ ಮತ್ತು ಕ್ವಾರಿಗಳನ್ನು ನಡೆಸುತ್ತಿದ್ದು, ಎಗ್ಗಿಲ್ಲದೆ ಬ್ಲಾಸ್ಟಿಂಗ್ ಮಾಡುವ ಮೂಲಕ ಸುರಂಗದ ನಾಲೆಗೆ ಕಂಟಕವಾಗಿದೆ. ಅಽಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ನಾಲೆಯ ಸಂರಕ್ಷಣೆಗೆ ಮುಂದಾಗುವುದರ ಜತೆಗೆ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಸ್ಥಳೀಯರಾದ ಗಂಜಾಂ ರವಿಚಂದ್ರ, ಕಾಳೇನಹಳ್ಳಿ ಮಹೇಶ್, ಕೋಡಿಶೆಟ್ಟಿಪುರ ತೇಜಸ್, ಅಲ್ಲಾಪಟ್ಟಣ ಸಿದ್ದೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

9 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

12 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

14 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

14 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

15 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

15 hours ago