ಮಂಡ್ಯ

ಗಣಿಗಾರಿಕೆ ಸ್ಫೋಟದಿಂದ ವಿ.ಸಿ ಸುರಂಗ ಕಾಲುವಿಗೆ ಅಪಾಯ : ಸ್ಥಳ ಪರಿಶೀಲಿಸಿದ ಅಧಿಕಾರಿಗಳು

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನನಕೆರೆ ಮತ್ತು ಆಲಗೂಡು ಗ್ರಾಮಗಳ ನಡುವಿನ ವಿ.ಸಿ.ನಾಲೆ ಸಂಪರ್ಕ ಸುರಂಗ ನಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ತಲೆ ಎತ್ತಿರುವ ಗಣಿಗಾರಿಕೆಗಳ ಸ್ಛೋಟದಿಂದಾಗಿ ಅಪಾಯವಾಗಲಿದೆ ಎಂಬ ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆ ಅಽಕಾರಗಳ ತಂಡ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ನೀರಾವರಿ ನಿಗಮದ ಎಕ್ಸಿಕ್ಯೂಟಿವ್ ಇಂಜಿನಿಯರ್ ವಾಸುದೇವ ನೀಡಿರುವ ದೂರಿನನ್ವಯ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಗಣಿ ಮತ್ತು ಭೂ ವಿಜ್ಞಾನದ ಹಿರಿಯ ಅಽಕಾರಿ ಪುಷ್ಪ ನೇತೃತ್ವದ ತಂಡ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತು.

ಸುರಂಗ ನಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ಕ್ರಷರ್ ಮತ್ತು ಕ್ವಾರಿಗಳ ದಾಖಲಾತಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಕ್ವಾರಿಗಳಲ್ಲಿ ಬ್ಲಾಸ್ಟಿಂಗ್ ನಡೆಸುತ್ತಿರುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಇದನ್ನು ಓದಿ : ಚಾಮರಾಜನಗರ| ಅಕ್ರಮ ಗಣಿಗಾರಿಕೆ ವಿರುದ್ಧ ಅನ್ನದಾತರ ಆಕ್ರೋಶ

ಎಕ್ಸಿಕ್ಯುಟಿವ್ ಇಂಜಿನಿಯರ್ ವಾಸುದೇವ ಮಾತನಾಡಿ, ಈ ಭಾಗದಲ್ಲಿ ಸುಮಾರು ೧.೩ ಕಿ.ಮೀ. ವರೆಗೂ ಸುರಂಗದ ಮೂಲಕವೇ ಹಾದು ಹೋಗುವ ವಿ.ಸಿ. ಸಂಪರ್ಕ ನಾಲೆಯು ಸುಮಾರು ೭೦ ಸಾವಿರ ಎಕರೆ ಪ್ರದೇಶದ ಜಮೀನುಗಳ ಕೃಷಿ ಚಟುವಟಿಕೆಗಳಿಗೆ ಆಧಾರಸ್ತಂಬವಾಗಿದೆ. ಇಲ್ಲಿನ ಕ್ವಾರಿ ಮತ್ತು ಕ್ರಷರ್‌ಗಳಲ್ಲಿ ನಡೆಯುತ್ತಿರುವ ಸ್ಛೋಟದಿಂದ ಸುರಂಗ ಕುಸಿಯುವ ಸಾಧ್ಯತೆಯಿದೆ. ಹಾಗಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ನೀಡಲಾಗಿದ್ದು, ನಾಲೆಯ ರಕ್ಷಣೆಗಾಗಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ ಮಾತನಾಡಿ, ಈ ಭಾಗದಲ್ಲಿ ಪ್ರಭಾವಿಗಳು ಹಾಗೂ ರಾಜಕೀಯ ನಾಯಕರ ಹಿಂಬಾಲಕರು ಕ್ರಷರ್ ಮತ್ತು ಕ್ವಾರಿಗಳನ್ನು ನಡೆಸುತ್ತಿದ್ದು, ಎಗ್ಗಿಲ್ಲದೆ ಬ್ಲಾಸ್ಟಿಂಗ್ ಮಾಡುವ ಮೂಲಕ ಸುರಂಗದ ನಾಲೆಗೆ ಕಂಟಕವಾಗಿದೆ. ಅಽಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ನಾಲೆಯ ಸಂರಕ್ಷಣೆಗೆ ಮುಂದಾಗುವುದರ ಜತೆಗೆ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಸ್ಥಳೀಯರಾದ ಗಂಜಾಂ ರವಿಚಂದ್ರ, ಕಾಳೇನಹಳ್ಳಿ ಮಹೇಶ್, ಕೋಡಿಶೆಟ್ಟಿಪುರ ತೇಜಸ್, ಅಲ್ಲಾಪಟ್ಟಣ ಸಿದ್ದೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

6 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

6 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

6 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

6 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

6 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

6 hours ago