ಮಂಡ್ಯ: ನಗರದಲ್ಲಿ 43 ಕೋಟಿ ರೂ ವೆಚ್ಚದಲ್ಲಿ ನಗರದ ಫ್ಯಾಕ್ಟರಿ ಸರ್ಕಲ್ ಹಾಗೂ ಸಂಜಯ್ ಸರ್ಕಲ್ ನಲ್ಲಿ ಹೈಟೆಕ್ ಮಾದರಿ ವೃತ್ತ ನಿರ್ಮಾಣ, ಎನ್ಎಚ್-275 ಶ್ರೀನಿವಾಸಪುರ ಗೇಟ್ ನಿಂದ ಇಂಡುವಾಳು ಅಂಡರ್ ಪಾಸ್ ವರೆಗೆ ಮಂಡ್ಯ ನಗರದ ಮಧ್ಯ ಭಾಗದಲ್ಲಿ ವಿಶ್ವ ದರ್ಜೆಯ ರಸ್ತೆ ಹಾಗೂ ಪಾದಾಚಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು 33 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಅಮರಾವತಿ ಹೋಟೆಲ್ನಿಂದ ಜ್ಯೋತಿ ಇಂಟರ್ನ್ಯಾಷನಲ್ ಹೋಟೆಲ್ ವರೆಗೆ ಹೈಟೆಕ್ ಪುಟ್ಬಾತ್ ಮತ್ತು ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು ಅಣ್ಣೂರಿನ ಮಾಜಿ ವಾಯ್ಸ್ ಚಾನ್ಸಲರ್ ರಾಜೇಂದ್ರ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು.
ಅಧಿಕಾರಕ್ಕೆ ಬಂದ 8 ತಿಂಗಳಲ್ಲಿಯೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಜಿಲ್ಲೆಯ ಜನಸಾಮಾನ್ಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ಶಾಸಕರಾದ ರವಿಕುಮಾರ್, ಉದಯ್ ಹಾಗೂ ರಮೇಶ್ ಬಂಡಿ ಸಿದ್ದೇಗೌಡ ಮೂವರು ನಗರದ ಅಭಿವೃದ್ಧಿಗಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ ಎಂದರು.
ಶಾಸಕ ಪಿ. ರವಿಕುಮಾರ್, ಉದ್ಯಮಿ ವೆಂಕಟರಮಣಗೌಡ( ಸ್ಟಾರ್ ಚಂದ್ರು) ಸೇರಿದಂತೆ ಇತರರು ಹಾಜರಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…