Categories: ಮಂಡ್ಯ

97 ಲಕ್ಷ ರೂ ವೆಚ್ಚದ ಕಬ್ಬು ಕಟಾವು ಯಂತ್ರ ವಿತರಿಸಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ:  ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮದ್ದೂರು ತಾಲ್ಲೂಕಿನ ಜ್ಯೋತಿ ಎಂಬ ರೈತ ಮಹಿಳೆ 97 ಲಕ್ಷ ರೂ ವೆಚ್ಚದ ಕಬ್ಬು ಕಟಾವು ಯಂತ್ರವನ್ನು ಹಾರ್ವೆಸ್ಟ್ ಹಬ್ ಎಂಬ ಯೋಜನೆಯಡಿ ಖರೀದಿಸಿದ್ದು 39,86,000 ರೂ ಸಬ್ಸಿಡಿ ಸರ್ಕಾರದಿಂದ ದೊರೆಯುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ  ತಿಳಿಸಿದರು.

ಅವರು ಇಂದು ಮದ್ದೂರು ತಾಲ್ಲೂಕಿನ ಬೆಳತೂರು ಗೇಟ್(ಮದ್ದೂರು-ಕೊಪ್ಪ ರಸ್ತೆ) ನಲ್ಲಿ ನಡೆದ ಕಬ್ಬು ಕಟಾವು ಯಂತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೃಷಿ ಮಾಡಲು ಬಹಳ ಜನ ಆಸಕ್ತಿ ಹೊಂದಿದ್ದೀರ. ಬಹಳಷ್ಟು ಜನ ಕೃಷಿ ಇಲಾಖೆಯಿಂದ ದೊರೆಯುವ ಸಂಪನ್ಮೂಲ, ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದೀರ. ಜೊತೆಗೆ ಕೃಷಿ ಬಗ್ಗೆ ತರಬೇತಿ ಪಡೆಯುವುದು, ಸಂಶೋಧನ ಕೇಂದ್ರದಲ್ಲಿ ವಿಚಾರ ವಿನಿಮಯ ಮಾಡಿಕೊಳ್ಳುವ ಪ್ರಕ್ರಿಯೆಗಳು ನಡೆಯುತ್ತಿವೆ. ಅಮೇರಿಕ ಹಾಗೂ ಇನ್ನಿತರೆ ದೇಶಗಳಲ್ಲಿ ಕೃಷಿ ಪದ್ದತಿಯು ಸಂಪೂರ್ಣವಾಗಿ ಯಂತ್ರದಿಂದ ಕೂಡಿರುವುದನ್ನು ನೋಡಿದಾಗ ನಮ್ಮ ದೇಶದ ರೈತರು ಕೃಷಿಯಲ್ಲಿ ಬಹಳ ಆಸಕ್ತಿಯಿಂದ ಯಂತ್ರಗಳನ್ನು ಕಡಿಮೆ ಪ್ರಮಾಣದಲ್ಲಿ ಬಳಸಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಹಲವಾರು ಕಾರಣಗಳಿಂದ ಕೃಷಿ ಕಾರ್ಮಿಕರ ಸಂಖ್ಯೆ ಕಡಿಮೆಯಾಗುತ್ತಿದೆ. ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಹೆಚ್ಚಾಗಬೇಕಿದೆ. ಇದರ ಬಗ್ಗೆ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ನಡೆಸುವ ತರಬೇತಿಯಲ್ಲಿ ಹೆಚ್ಚು ಜನರು ಭಾಗವಹಿಸಬೇಕು ಎಂದರು.

97 ಲಕ್ಷ ರೂ ಗಳ ಕಬ್ಬು ಕಟಾವು ಯಂತ್ರವನ್ನು ಪರಿಶಿಷ್ಟ ಜಾತಿ, ಪಂಗಡದವರಿಗೆ ಇದೆ ಯಂತ್ರ ನೀಡಿದರೆ 49 ಲಕ್ಷ ರೂ ಸಬ್ಸಿಡಿ ನೀಡಲಾಗುವುದು. ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಸರ್ಕಾರ ಸದಾ ರೈತರ ಪರವಾಗಿ ಕೆಲಸ ಮಾಡುತ್ತಿದ್ದು, ಕೃಷಿ ಯಂತ್ರೋಪಕರಣಗಳ ಬಳಕೆಯಿಂದ ರೈತರಿಗೆ ಹೆಚ್ಚಿನ ಇಳುವಾರಿ ಹಾಗೂ ಲಾಭ ಬರಲಿದೆ. ಇದನ್ನು ರೈತರು ಮನಗಂಡು ಹೆಚ್ಚು ಉಪಯೋಗಿಸಿಕೊಳ್ಳಬೇಕು ಎಂದರು.

ಕಬ್ಬು ಕಟಾವು ಯಂತ್ರವನ್ನು ಬಾಡಿಗೆಗೆ ನೀಡಿ ಕೆಲವು ವರ್ಷಗಳ ನಂತರ ಯಂತ್ರದಿಂದ ಲಾಭ ಬರಲಿದೆ ಎಂದರು.

ಈ ಯಂತ್ರವನ್ನು ಬೆಳಗಾವಿಯಲ್ಲಿ ಹೆಚ್ಚು ಜನರು ಬಳಸುತ್ತಿದ್ದಾರೆ. ಮೊದಲ ಬಾರಿಗೆ ಬೆಳಗಾವಿಯಲ್ಲಿ 20 ಯಂತ್ರವನ್ನು ‌ನೀಡಲಾಗಿತ್ತು. ಈ ಬಾರಿ ಕಬ್ಬು ಕಟಾವು ಯಂತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು, 100 ಯಂತ್ರಗಳಿಗೆ 500 ಅರ್ಜಿಗಳು ಬಂದಿವೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಕಟಾವಿಗಾಗಿ ಹೊರ ಜಿಲ್ಲೆಯಿಂದ ಅವರಿಗೆ ಮುಂಗಡ ನೀಡಿ ಕರೆತರಲಾಗುತ್ತದೆ. ಇಂತಹ ಯಂತ್ರ ಖರೀದಿಗೆ ರೈತರನ್ನು ಸಕ್ಕರೆ ಕಾರ್ಖಾನೆಗಳು ಪ್ರೋತ್ಸಾಹಿಸಬೇಕು ಎಂದರು.

ಭತ್ತ ಹಾಗೂ ರಾಗಿ ಬೆಳೆಯ ನಾಟಿಯನ್ನು ಮಾಡುವ ರೈತರು ನೀರನ್ನು ಸಮ ಪ್ರಮಾಣದಲ್ಲಿ ಹಾಯಿಸಬೇಕು. ನೀರನ್ನು ಹೆಚ್ಚಾಗಿ ಹಾಯಿಸಿದಲ್ಲಿ ಬೆಳೆ ಇಳುವರಿ ಕಡಿಮೆಯಾಗುವುದು. ವೈಜ್ಞಾನಿಕ ವಿಧಾನವನ್ನು ತಿಳಿದು ಕೃಷಿ ಮಾಡುವುದು ಸೂಕ್ತ. ಭತ್ತ ರಾಗಿಯ ಬಿತ್ತನೆ, ಗೊಬ್ಬರ ಹಾಗೂ ಔಷಧಿಯನ್ನು ಸರ್ಕಾರದಿಂದ ರೈತರಿಗೆ ಯಾವುದೇ ಕೊರತೆ ಬಾರದಂತೆ ನೀಡಲಾಗುತ್ತಿದೆ. ಇನ್ನೂ ಹಲವಾರು ಹೊಸ ಕಾರ್ಯಕ್ರಮಗಳನ್ನು ರೈತರಿಗೆ ನೀಡುವ ಸಲುವಾಗಿ ಸರ್ಕಾರವು ಚಿಂತಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ರವಿಕುಮಾರ್, ಮದ್ದೂರು ಶಾಸಕ ಉದಯ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago