ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆಯಲ್ಲಿ ಸಿ.ಡಿ.ಎಸ್. ನಾಲೆ ಒಡೆದು ರೈತರ ಬೆಳೆ ಹಾನಿಯಾಗಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆ ನಡೆಸಿ ಮಾತನಾಡಿದ ಅವರು, ಭಾರೀ ಮಳೆಯಾಗಿರುವುದರಿಂದ ಸಿ.ಡಿ.ಎಸ್. ನಾಲೆ ಒಡೆದು ಕೃಷಿ ಬೆಳೆ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮಳೆ ನಿಂತ ನಂತರ ಜಂಟಿ ಸರ್ವೆ ಕಾರ್ಯಾಚರಣೆ ನಡೆಸಿ ಯಾರ ಬೆಳೆ ಎಷ್ಟು ಹಾನಿಯಾಗಿದೆ ಎಂದು ತಿಳಿದುಕೊಂಡು ಅಂದೇ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸರ್ವೆ ನಂತರವೇ ಎಷ್ಟು ಎಕರೆ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತಿಳಿಯುತ್ತದೆ ಎಂದು ತಿಳಿಸಿದರು.
ಸಿ.ಡಿ.ಎಸ್. ನಾಯಲ್ಲಿ ನೀರನ್ನು ನಿಲ್ಲಿಸಲಾಗಿದೆ. ಮಳೆ ನಿಂತ ನಂತರ ಒಡೆದ ನಾಲೆಯನ್ನು ಸರಿಪಡಿಸಲಾಗುವುದು. ಎನ್ಡಿಆರ್ಎಸ್ನಲ್ಲಿ ೧ ಹೆಕ್ಟೇರ್ ಮಳೆ ಆಶ್ರಿತ ಬೆಳೆಗಳಿಗೆ ಎಂಟೂವರೆ ಸಾವಿರ, ನೀರಾವರಿ ಆಶ್ರಿತ ಬೆಳೆಗಳಿಗೆ ೧೭ ಸಾವಿರ, ತೋಟಗಾರಿಕೆ ಬೆಳೆಗೆ ೨೨,೫೦೦ ರೂ. ಪರಿಹಾರ ನೀಡಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಂಟಾದ ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ರೈತರ ಬೇಡಿಕೆಯಂತೆ ಎಲ್ಲ ಬಗೆಯ ಬೆಳೆಗಳಿಗೂ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಎಂಟೂವರೆ ಸಾವಿರ ನೀಡುವುದಾಗಿ ಘೋಷಣೆ ಮಾಡಿದೆ ಎಂದು ತಿಳಿಸಿದರು.
ಇದನ್ನೂ ಓದಿ:-ಮಳೆಯಿಂದ ಒಡೆದು ಹೋಗಿದ್ದ ಸಿಡಿಎಸ್ ನಾಲೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ
ಜಂಟಿ ಸರ್ವೆ ನಡೆದ ತಕ್ಷಣ ಯಾರೂ ಕಾಯುವಂತಿಲ್ಲ, ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಮಾರನೇ ದಿನಕ್ಕೆ ಪರಿಹಾರವನ್ನು ನೀಡಲಾಗುವುದು. ಈ ಪ್ರಕ್ರಿಯೆಯನ್ನು ಮಳೆ ನಿಂತ ಒಂದು ವಾರದೊಳಗೆ ಮಾಡಲಾಗುತ್ತದೆ, ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿದ್ದರೆ ವಿಮೆ ಹಣದ ಜತೆಗೆ ಸರ್ಕಾರ ಪರಿಹಾರವನ್ನು ನೀಡಲಿದೆ ಎಂದರು.
ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಽಕಾರಿ ಡಾ.ಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಶ್ರೀರಂಗಪಟ್ಟಣ ತಹಸಿಲ್ದಾರ್ ಚೇತನಾ ಯಾದವ್, ಕಾವೇರಿ ನೀರಾವರಿ ನಿಗಮದ ಅಽಕ್ಷಕ ಇಂಜಿನಿಯರ್ ರಘುರಾಮ್, ಕಾರ್ಯಪಾಲಕ ಇಂಜಿನಿಯರ್ ಜಯಂತ್, ಜಂಟಿ ಕೃಷಿ ನಿರ್ದೇಶಕ ಅಶೋಕ್ ಸೇರಿದಂತೆ ಇತರರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…
ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…