ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆಯಲ್ಲಿ ಸಿ.ಡಿ.ಎಸ್. ನಾಲೆ ಒಡೆದು ರೈತರ ಬೆಳೆ ಹಾನಿಯಾಗಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆ ನಡೆಸಿ ಮಾತನಾಡಿದ ಅವರು, ಭಾರೀ ಮಳೆಯಾಗಿರುವುದರಿಂದ ಸಿ.ಡಿ.ಎಸ್. ನಾಲೆ ಒಡೆದು ಕೃಷಿ ಬೆಳೆ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮಳೆ ನಿಂತ ನಂತರ ಜಂಟಿ ಸರ್ವೆ ಕಾರ್ಯಾಚರಣೆ ನಡೆಸಿ ಯಾರ ಬೆಳೆ ಎಷ್ಟು ಹಾನಿಯಾಗಿದೆ ಎಂದು ತಿಳಿದುಕೊಂಡು ಅಂದೇ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸರ್ವೆ ನಂತರವೇ ಎಷ್ಟು ಎಕರೆ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತಿಳಿಯುತ್ತದೆ ಎಂದು ತಿಳಿಸಿದರು.
ಸಿ.ಡಿ.ಎಸ್. ನಾಯಲ್ಲಿ ನೀರನ್ನು ನಿಲ್ಲಿಸಲಾಗಿದೆ. ಮಳೆ ನಿಂತ ನಂತರ ಒಡೆದ ನಾಲೆಯನ್ನು ಸರಿಪಡಿಸಲಾಗುವುದು. ಎನ್ಡಿಆರ್ಎಸ್ನಲ್ಲಿ ೧ ಹೆಕ್ಟೇರ್ ಮಳೆ ಆಶ್ರಿತ ಬೆಳೆಗಳಿಗೆ ಎಂಟೂವರೆ ಸಾವಿರ, ನೀರಾವರಿ ಆಶ್ರಿತ ಬೆಳೆಗಳಿಗೆ ೧೭ ಸಾವಿರ, ತೋಟಗಾರಿಕೆ ಬೆಳೆಗೆ ೨೨,೫೦೦ ರೂ. ಪರಿಹಾರ ನೀಡಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಂಟಾದ ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ರೈತರ ಬೇಡಿಕೆಯಂತೆ ಎಲ್ಲ ಬಗೆಯ ಬೆಳೆಗಳಿಗೂ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಎಂಟೂವರೆ ಸಾವಿರ ನೀಡುವುದಾಗಿ ಘೋಷಣೆ ಮಾಡಿದೆ ಎಂದು ತಿಳಿಸಿದರು.
ಇದನ್ನೂ ಓದಿ:-ಮಳೆಯಿಂದ ಒಡೆದು ಹೋಗಿದ್ದ ಸಿಡಿಎಸ್ ನಾಲೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ
ಜಂಟಿ ಸರ್ವೆ ನಡೆದ ತಕ್ಷಣ ಯಾರೂ ಕಾಯುವಂತಿಲ್ಲ, ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಮಾರನೇ ದಿನಕ್ಕೆ ಪರಿಹಾರವನ್ನು ನೀಡಲಾಗುವುದು. ಈ ಪ್ರಕ್ರಿಯೆಯನ್ನು ಮಳೆ ನಿಂತ ಒಂದು ವಾರದೊಳಗೆ ಮಾಡಲಾಗುತ್ತದೆ, ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿದ್ದರೆ ವಿಮೆ ಹಣದ ಜತೆಗೆ ಸರ್ಕಾರ ಪರಿಹಾರವನ್ನು ನೀಡಲಿದೆ ಎಂದರು.
ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಽಕಾರಿ ಡಾ.ಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಶ್ರೀರಂಗಪಟ್ಟಣ ತಹಸಿಲ್ದಾರ್ ಚೇತನಾ ಯಾದವ್, ಕಾವೇರಿ ನೀರಾವರಿ ನಿಗಮದ ಅಽಕ್ಷಕ ಇಂಜಿನಿಯರ್ ರಘುರಾಮ್, ಕಾರ್ಯಪಾಲಕ ಇಂಜಿನಿಯರ್ ಜಯಂತ್, ಜಂಟಿ ಕೃಷಿ ನಿರ್ದೇಶಕ ಅಶೋಕ್ ಸೇರಿದಂತೆ ಇತರರಿದ್ದರು.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…