ಮಂಡ್ಯ: ರಥಸಪ್ತಮಿ ಹಿನ್ನೆಲೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಇಂದು(ಫೆಬ್ರವರಿ.5) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲದೇ ಈ ವೇಳೆ ಯದುಗಿರಿ ಅಮ್ಮನವರ ದೇಗುಲ ಸೇರಿದಂತೆ ಕ್ಷೇತ್ರಾಧಿ ದೇವತೆಗಳ ದರ್ಶನವನ್ನು ಸಹ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಇವರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾಥ್ ನೀಡಿದ್ದಾರೆ.
ಇನ್ನೂ ಚಲುವನಾರಾಯಣಸ್ವಾಮಿ ರಥಸಪ್ತಮಿ ಆಚರಣೆ ಹಿನ್ನೆಲೆ ದೇವರಿಗೆ ಸೂರ್ಯ ಮಂಡಲೋತ್ಸವ ನಡೆಯಿತು. ಇದೇ ವೇಳೆ ಸೂರ್ಯಮಂಡಲ ವಾಹನದಲ್ಲಿ ದೇವರ ವೈಭವದ ಮೆರವಣಿಗೆ ನಡೆಯಿತು. ಇನ್ನೂ ವಾಹನ ಮಂಟಪದಿಂದ ದೇಗುಲದ ಸುತ್ತ ಹಾಗೂ ರಾಜಬೀದಿಗಳಲ್ಲಿ ಸಾಗಿದ ಮೆರವಣಿಯಲ್ಲಿ ಸಚಿವ ಚಲುವರಾಯಸ್ವಾಮಿ, ಪತ್ನಿ ಧನಲಕ್ಷ್ಮಿ, ಪುತ್ರ ಸಚಿನ್ ಮತ್ತು ಸೊಸೆ ಭಾಗವಹಿಸಿದ್ದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…