ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಜನತಾ ದರ್ಶನ ಪಾಲಿಟಿಕ್ಸ್ ಶುರುವಾದಂತೆ ಕಾಣುತ್ತಿದೆ. ಯಾಕೆಂದರೆ ನಿನ್ನೆಯಷ್ಟೆ ಜಿಲ್ಲೆಯ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದರು. ಈ ಬೆನ್ನಲ್ಲೆ ಇಂದು ಸಚಿವ ಎನ್ ಚೆಲುವರಾಯಸ್ವಾಮಿ ಕೂಡ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ನಿನ್ನೆ (ಜು.೫ ) ಅಧಿಕಾರಿಗಳು ಗೈರಾಗಿದ್ದರು ಕೂಡ ಎಚ್.ಡಿ ಕುಮಾರಸ್ವಾಮಿ ಅವರು ಬೆಳಗ್ಗೆ ೧೧.೩೦ರಿಂದ ನಿರಂತರವಾಗಿ ಜನತಾ ದರ್ಶನ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳನ್ನ ಆಲಿಸಿ ಪರಿಹಾರ ಒದಗಿಸಲು ಮುಂದಾಗಿದ್ದರು.
ಇನ್ನು ಇಂದು ಹನುಮ ಧ್ವಜ ವಿವಾದ ನಡೆದ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಶಾಸಕ ಗಣಿಗ ರವಿಕುಮಾರ್ ಅಧ್ಯಕ್ಷತೆಯಲ್ಲಿ ಸಚಿವ ಚೆಲುವರಾಯಸ್ವಾಮಿ ಅವರಿಂದ ಜನತಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಎಚ್ಡಿಕೆ ನಡೆಸಿದ ಜನತಾ ದರ್ಶನದಲ್ಲಿ ಯಾರೊಬ್ಬ ಅಧಿಕಾರಿಗಳು ಕೂಡ ಹಾಜರಾಗಿರಲಿಲ್ಲ. ಆದರೆ ಇಂದು ನಡೆಯುವ ಕಾರ್ಯಕ್ರಮಕ್ಕೆ ೫೩ ಇಲಾಖೆಗಳ ಜಿಲ್ಲೆಯ ಅಧಿಕಾರಿಗಳು ಖುದ್ದು ಹಾಜರಿರಲು ಸೂಚನೆ ನೀಡಲಾಗಿದೆ. ಈ ಮೂಲಕ ಕುಮಾರಸ್ವಾಮಿ ಅವರಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.
ಜೆರುಸಲೆಮ್ : ಇಸ್ರೇಲ್ನ ಸೇನಾ ದಾಳಿಯಲ್ಲಿ ಇರಾನ್ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್…
ಅಹಮದಬಾದ್ : 47,000 ಟನ್ ಎಲ್ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ.…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…