ಮಂಡ್ಯ

ಶುರುವಾಯ್ತು ಜನತಾ ದರ್ಶನ ಪಾಲಿಟಿಕ್ಸ್ : ನಿನ್ನೆ ಕುಮಾರಣ್ಣ , ಇಂದು ಚೆಲುವರಾಯಸ್ವಾಮಿ

ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಜನತಾ ದರ್ಶನ ಪಾಲಿಟಿಕ್ಸ್‌ ಶುರುವಾದಂತೆ ಕಾಣುತ್ತಿದೆ. ಯಾಕೆಂದರೆ ನಿನ್ನೆಯಷ್ಟೆ ಜಿಲ್ಲೆಯ ಅಂಬೇಡ್ಕರ್‌ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದರು. ಈ ಬೆನ್ನಲ್ಲೆ ಇಂದು ಸಚಿವ ಎನ್‌ ಚೆಲುವರಾಯಸ್ವಾಮಿ ಕೂಡ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

ನಿನ್ನೆ (ಜು.೫ ) ಅಧಿಕಾರಿಗಳು ಗೈರಾಗಿದ್ದರು ಕೂಡ ಎಚ್.ಡಿ ಕುಮಾರಸ್ವಾಮಿ ಅವರು ಬೆಳಗ್ಗೆ ೧೧.೩೦ರಿಂದ ನಿರಂತರವಾಗಿ ಜನತಾ ದರ್ಶನ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳನ್ನ ಆಲಿಸಿ ಪರಿಹಾರ ಒದಗಿಸಲು ಮುಂದಾಗಿದ್ದರು.

ಇನ್ನು ಇಂದು ಹನುಮ ಧ್ವಜ ವಿವಾದ ನಡೆದ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಶಾಸಕ ಗಣಿಗ ರವಿಕುಮಾರ್‌ ಅಧ್ಯಕ್ಷತೆಯಲ್ಲಿ ಸಚಿವ ಚೆಲುವರಾಯಸ್ವಾಮಿ ಅವರಿಂದ ಜನತಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಎಚ್ಡಿಕೆ ನಡೆಸಿದ ಜನತಾ ದರ್ಶನದಲ್ಲಿ ಯಾರೊಬ್ಬ ಅಧಿಕಾರಿಗಳು ಕೂಡ ಹಾಜರಾಗಿರಲಿಲ್ಲ. ಆದರೆ ಇಂದು ನಡೆಯುವ ಕಾರ್ಯಕ್ರಮಕ್ಕೆ ೫೩ ಇಲಾಖೆಗಳ ಜಿಲ್ಲೆಯ ಅಧಿಕಾರಿಗಳು ಖುದ್ದು ಹಾಜರಿರಲು ಸೂಚನೆ ನೀಡಲಾಗಿದೆ. ಈ ಮೂಲಕ ಕುಮಾರಸ್ವಾಮಿ ಅವರಿಗೆ  ಟಕ್ಕರ್‌ ಕೊಡಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

37 mins ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

1 hour ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

1 hour ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

2 hours ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

3 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

3 hours ago