ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಜನತಾ ದರ್ಶನ ಪಾಲಿಟಿಕ್ಸ್ ಶುರುವಾದಂತೆ ಕಾಣುತ್ತಿದೆ. ಯಾಕೆಂದರೆ ನಿನ್ನೆಯಷ್ಟೆ ಜಿಲ್ಲೆಯ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದರು. ಈ ಬೆನ್ನಲ್ಲೆ ಇಂದು ಸಚಿವ ಎನ್ ಚೆಲುವರಾಯಸ್ವಾಮಿ ಕೂಡ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ನಿನ್ನೆ (ಜು.೫ ) ಅಧಿಕಾರಿಗಳು ಗೈರಾಗಿದ್ದರು ಕೂಡ ಎಚ್.ಡಿ ಕುಮಾರಸ್ವಾಮಿ ಅವರು ಬೆಳಗ್ಗೆ ೧೧.೩೦ರಿಂದ ನಿರಂತರವಾಗಿ ಜನತಾ ದರ್ಶನ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳನ್ನ ಆಲಿಸಿ ಪರಿಹಾರ ಒದಗಿಸಲು ಮುಂದಾಗಿದ್ದರು.
ಇನ್ನು ಇಂದು ಹನುಮ ಧ್ವಜ ವಿವಾದ ನಡೆದ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಶಾಸಕ ಗಣಿಗ ರವಿಕುಮಾರ್ ಅಧ್ಯಕ್ಷತೆಯಲ್ಲಿ ಸಚಿವ ಚೆಲುವರಾಯಸ್ವಾಮಿ ಅವರಿಂದ ಜನತಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಎಚ್ಡಿಕೆ ನಡೆಸಿದ ಜನತಾ ದರ್ಶನದಲ್ಲಿ ಯಾರೊಬ್ಬ ಅಧಿಕಾರಿಗಳು ಕೂಡ ಹಾಜರಾಗಿರಲಿಲ್ಲ. ಆದರೆ ಇಂದು ನಡೆಯುವ ಕಾರ್ಯಕ್ರಮಕ್ಕೆ ೫೩ ಇಲಾಖೆಗಳ ಜಿಲ್ಲೆಯ ಅಧಿಕಾರಿಗಳು ಖುದ್ದು ಹಾಜರಿರಲು ಸೂಚನೆ ನೀಡಲಾಗಿದೆ. ಈ ಮೂಲಕ ಕುಮಾರಸ್ವಾಮಿ ಅವರಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…