ಮಂಡ್ಯ : ಯಾರು ಅವನು ಪುಟ್ಟರಾಜು, ಸರಿಯಾಗಿ ಮಾತನಾಡೋಕ್ಕೆ ಹೇಳಿ ಅವನಿಗೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ವಿರುದ್ಧ ಏಕವಚನದಲ್ಲಿ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
CWRC ಮುಂದೆ ಸರಿಯಾದ ವಾದ ಮಂಡಿಸಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ಅವನು ಯಾರು ಪುಟ್ಟರಾಜು ಸರಿಯಾಗಿ ಮಾತನಾಡಲು ಹೇಳಿ. ಸುಮ್ನೆ ಏನೇನೋ ಮಾತನಾಡಿದ್ರೆ ಹೇಗೆ. ನಾನು ಅವರತ್ತಿರ ಕಲಿತುಕೊಳ್ಳಬೇಕಾ..? ನನಗೆ ಬೇಡ ಉತ್ತರ ಕೊಡೋದು, ನಮ್ಮ ಎಂಎಲ್ ಎ ರವಿಗೆ ಉತ್ತರ ಕೊಡಲು ಹೇಳಿ ಪುಟ್ಟರಾಜುಗೆ ಸಾಕು ಎಂದು ಕಿಡಿಕಾರಿದರು.
ಅಲ್ಲದೆ ಅಧಿಕಾರಿಗಳು ಸಭೆಯಲ್ಲಿ ಸರಿಯಾಗಿ ಮಾಹಿತಿ ನೀಡಿದ್ದಾರೆ. ಖಡಕ್ ಆಗಿ ನೀರು ಬೀಡೋದಿಕ್ಕೆ ಆಗಲ್ಲ ಅಂತ ಉತ್ತರ ಕೊಟ್ಟಿದ್ದಾರೆ. ತೀಟೆ ಮಾಡಲು ವಿರೋಧ ಪಕ್ಷದವರಿಗೆ ಬೇರೆ ವಿಚಾರವಿದೆ. ಅವಕಾಶಗಳು ಕೂಡ ಇದೆ. ಪುಟ್ಟರಾಜುಗೆ ಇದೇ ಕೆಲಸನಾ, ಬೇರೆ ಕೆಲಸ ಇಲ್ವಾ..? ಕುಮಾರಸ್ವಾಮಿ ಅವರೇ ಹೇಳಿದ್ರು ನನ್ನ ಮೊದಲ ಆದ್ಯತೆ ಕಾವೇರಿ ಎಂದು. ಕುಮಾರಸ್ವಾಮಿ ಅವರೇ ಮಾತುಕೊಟ್ಟಿದ್ದು, ಈಗ ಅವರೇ ಹೇಳಲಿ ಅದಕ್ಕೂ ನನಗೂ ಸಂಬಂಧವಿಲ್ಲ ಎಂದು . ಕಾವೇರಿ ಸಮಸ್ಯೆ ಬಗೆಹರಿಸುವುದು ಕುಮಾರಸ್ವಾಮಿ ಜವಾಬ್ದಾರಿ ಎಂದು ಹೇಳಿದರು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…