ಮಂಡ್ಯ

ತಮ್ಮ ತಪ್ಪು ಮುಚ್ಚಲು ಬಿಜೆಪಿ ಸಿಎಂ ಹೆಸರೇಳಿದ್ರೆ ಸರಿಹೋಗುತ್ತೆ ಅಂದುಕೊಂಡಿದೆ ; ಚೆಲುವರಾಯಸ್ವಾಮಿ

ಮಂಡ್ಯ : ಮುಡಾ ಹಗರಣ ವಿಚಾರವಾಗಿ ನಡೆದಿರುವ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಿಎಂ ಹೆಸರೇಳಿದ್ರೆ ಸರಿ ಹೋಗುತ್ತದೆ ಎಂದು ಬಿಜೆಪಿಯವರು ಅಂದುಕೊಂಡಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು.

ಮುಡಾ ಹಗರಣ ವಿಚಾರವಾಗಿ ವಿಪಕ್ಷಗಳು ಸಿಎಂ ವಿರುದ್ಧ ಆರೋಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,  ನಾನು ಈ ಬಗ್ಗೆ ಮೊನ್ನೆಯೇ ಹೇಳಿದ್ದೇನೆ. ಸಿದ್ದರಾಮಯ್ಯ ಅವರ ಜಮೀನನ್ನು ನೋಟಿಸ್‌ ಇಲ್ಲದೆ, ಅವರ ಅನುಮತಿ ಪಡೆದುಕೊಳ್ಳದೆ ಮುಡಾದವರು ಜಮೀನು ಉಪಯೋಗಿಸಿಕೊಂಡಿದ್ದಾರೆ. ದಯಮಾಡಿ ಸ್ಪಷ್ಟವಾಗಿ ನೀವು ಇದನ್ನ ಅರ್ಥ ಮಾಡಿಕೊಳ್ಳಬೇಕು. ಕ್ಲಿಯರ್‌ ಕಟ್ಟಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಅವರಣ್ಣ ಕೊಟ್ಟಿದ್ದಂತಹ ಜಮೀನನ್ನ ಅನಧಿಕೃತವಾಗಿ ಯಾವುದೇ ಮಾಹಿತಿ ಇಲ್ಲದೆ, ಯಾವುದೇ ನೋಟಿಸ್‌ ಕೊಡದೆ ಮುಡಾದವರು ಅವರಿಂದ ಪಡೆದುಕೊಂಡಿದ್ದಾರೆ. ಬಳಿಕ ಇವರು ಕಾನೂನಿನ ಪ್ರಕಾರ ನಮಗೆ ಪರ್ಯಾಯ ಜಮೀನು ಕೊಡಿ ಎಂದು ಕೇಳಿದ್ದಾರೆ. ಅದಕ್ಕೆ ಮುಡಾದವರು ಸಹ ಜಮೀನು ಕೊಟ್ಟಿದ್ದಾರೆ.

ರೆಸ್ಯುಲೇಶನ್‌ ತಪ್ಪಾಗಿದ್ರೆ ಅಥವಾ ಇವರಿಗೆ ಎಕ್ಟ್ರಾ ಜಮೀನು ಕೊಟ್ಟಿದ್ರೆ, ಅಥವಾ ಬೇರೆಯವರಿಗೆ ಜಮೀನು ಕೊಟ್ಟಿದ್ರೆ ಯಾರದ್ದು ತಪ್ಪು, ಮುಡಾದವರ ತಪ್ಪು. ಯಾರ ಆಡಳಿತ ಇತ್ತು..? ಬಿಜೆಪಿ ಆಡಳಿತ. ಯಾರು ಅಧ್ಯಕ್ಷರಾಗಿದ್ರು..? ಬಿಜೆಪಿಯವರು ಆಗಿದ್ರು. ಬಿ.ವೈ ವಿಜಯೇಂದ್ರ, ಆರ್ ಅಶೋಕ್‌ ಇವರು ಪ್ರತಿಭಟನೆ ಮಾಡಬೇಕಾಗಿದದ್ದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಅಲ್ಲ, ಬೊಮ್ಮಾಯಿ, ಎಚ್‌.ವಿ ರಾಜೀವ್ ವಿರುದ್ಧ. ಅವತ್ತು ಇದ್ದಂತಹ ಆಡಳಿತ ಮಂಡಳಿ ಇದಕ್ಕೆ ಕಾರಣ. ಈಗಾಗಿ ಅವರ ತಪ್ಪು ಮುಚ್ಚಿಟ್ಟುಕೊಳ್ಳಲು ಸಿದ್ರಾಮಯ್ಯ ಹೆಸರೇಳಿದರೆ ಸರಿಹೋಗುತ್ತದೆ ಅಂದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago