ಮಂಡ್ಯ : ನಿಖಿಲ್ ಕುಮಾರಸ್ವಾಮಿ ಬಂಧನಕ್ಕೆ ಸಚಿವರೊಬ್ಬರಿಂದ ಷಡ್ಯಂತ್ರ ಆರೋಪ ವಿಚಾರ , ನಮಗೂ ಅದಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ. ಪ್ಲ್ಯಾನ್ ಮಾಡುವಂತದ್ದು ಏನು ಇಲ್ಲ ಎಂದು ಮಂಡ್ಯದಲ್ಲಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿಖಿಲ್ ಬಂಧನಕ್ಕೆ ಯಾರು ಪ್ಲ್ಯಾನ್ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ನನಗೆ ಗೊತ್ತಿಲ್ಲದೆ ಇರೋದ್ರ ಬಗ್ಗೆ ಮಾತನಾಡೋಲ್ಲ. ವಿಜಯೇಂದ್ರನನ್ನ ಪೊಲೀಸರು ವಶಕ್ಕೆ ಪಡೆದಿದ್ದರು ಆಮೇಲೆ ಬಿಟ್ಟರು. ಇದನ್ನೆಲ್ಲಾ ಪ್ಲ್ಯಾನ್ ಮಾಡೋದು ಏನಿದೆ. ಸಾರ್ವಜನಿಕರಿಗೆ ತೊಂದರೆ ಆಗಿದೆ ಅಂದಾಗ ವಶಕ್ಕೆ ತೆಗೆದುಕೊಂಡಿದ್ದಾರೆ ಆಮೇಲೆ ಬಿಡುತ್ತಾರೆ. ಅದು ಯಾವ ವಿಚಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.
ಅಲ್ಲದೆ ದೇವೇಗೌಡರ ಕುಟುಂಬ ಮುಗಿಸಲು ಈ ರೀತಿ ಮಾಡ್ತಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ಕುಟುಂಬದವರೇ ರೇವಣ್ಣ ವಿಚಾರವನ್ನು ಅತೀ ಹೆಚ್ಚು ಮಾಧ್ಯಮ ಮುಂದೆ ಚರ್ಚೆ ಮಾಡಿದ್ದು. ಆದರೆ ಅವರು ಜೈಲಿಗೆ ಹೋದ ಮೇಲೆ ಯಾಕೆ ಏನು ಮಾತನಾಡುತ್ತಿಲ್ಲ. ಇದರಲ್ಲಿ ಬಹಳ ಆಶ್ಚರ್ಯ ಜೊತೆಗೆ ಅರ್ಥಮಾಡಿಕೊಳ್ಳುವುದು ಇದೆ. ನನಗೂ ಇದು ಸಮಾಧಾನ ತರುವಂತದ್ದು ಅಲ್ಲ. ನನಗೂ ಸತ್ಯ ಗೊತ್ತಿಲ್ಲ, ಸತ್ಯ ಗೊತ್ತಿಲ್ಲದೆ ನಾನು ಏನು ಹೇಳಲಿ. ಇದೆಲ್ಲಾ ಪರಿಸ್ಥಿತಿಗಳು. ನಾವು ತಪ್ಪು ಮಾಡಲಿ ಇನ್ನೋಬ್ಬರು ತಪ್ಪು ಮಾಡಲಿ ಕಾನೂನು ಅದು. ನಾವು ಏನು ಮಾಡೊಕ್ಕೆ ಆಗಲ್ಲ, ಕಾನೂನು ಪ್ರಕಾರ ಹೋಗಬೇಕು ಅಷ್ಟೆ ಎಂದು ಹೇಳಿದರು.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…