ಮಂಡ್ಯ

ನಿಖಿಲ್ ಬಂಧನಕ್ಕೆ ಪ್ಲ್ಯಾನ್ ಬಗ್ಗೆ ಗೊತ್ತಿಲ್ಲ ; ಚೆಲುವರಾಯಸ್ವಾಮಿ

ಮಂಡ್ಯ : ನಿಖಿಲ್‌ ಕುಮಾರಸ್ವಾಮಿ ಬಂಧನಕ್ಕೆ ಸಚಿವರೊಬ್ಬರಿಂದ ಷಡ್ಯಂತ್ರ ಆರೋಪ ವಿಚಾರ , ನಮಗೂ ಅದಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ. ಪ್ಲ್ಯಾನ್‌ ಮಾಡುವಂತದ್ದು ಏನು ಇಲ್ಲ  ಎಂದು ಮಂಡ್ಯದಲ್ಲಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿಖಿಲ್‌ ಬಂಧನಕ್ಕೆ ಯಾರು ಪ್ಲ್ಯಾನ್‌ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ನನಗೆ ಗೊತ್ತಿಲ್ಲದೆ ಇರೋದ್ರ ಬಗ್ಗೆ ಮಾತನಾಡೋಲ್ಲ. ವಿಜಯೇಂದ್ರನನ್ನ ಪೊಲೀಸರು ವಶಕ್ಕೆ ಪಡೆದಿದ್ದರು ಆಮೇಲೆ ಬಿಟ್ಟರು. ಇದನ್ನೆಲ್ಲಾ ಪ್ಲ್ಯಾನ್‌ ಮಾಡೋದು ಏನಿದೆ. ಸಾರ್ವಜನಿಕರಿಗೆ ತೊಂದರೆ ಆಗಿದೆ ಅಂದಾಗ ವಶಕ್ಕೆ ತೆಗೆದುಕೊಂಡಿದ್ದಾರೆ ಆಮೇಲೆ ಬಿಡುತ್ತಾರೆ. ಅದು ಯಾವ ವಿಚಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.

ಅಲ್ಲದೆ ದೇವೇಗೌಡರ ಕುಟುಂಬ ಮುಗಿಸಲು ಈ ರೀತಿ ಮಾಡ್ತಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ಕುಟುಂಬದವರೇ ರೇವಣ್ಣ ವಿಚಾರವನ್ನು ಅತೀ ಹೆಚ್ಚು  ಮಾಧ್ಯಮ ಮುಂದೆ ಚರ್ಚೆ ಮಾಡಿದ್ದು. ಆದರೆ ಅವರು ಜೈಲಿಗೆ ಹೋದ ಮೇಲೆ ಯಾಕೆ ಏನು ಮಾತನಾಡುತ್ತಿಲ್ಲ. ಇದರಲ್ಲಿ ಬಹಳ ಆಶ್ಚರ್ಯ ಜೊತೆಗೆ ಅರ್ಥಮಾಡಿಕೊಳ್ಳುವುದು ಇದೆ. ನನಗೂ ಇದು ಸಮಾಧಾನ ತರುವಂತದ್ದು ಅಲ್ಲ. ನನಗೂ ಸತ್ಯ ಗೊತ್ತಿಲ್ಲ, ಸತ್ಯ ಗೊತ್ತಿಲ್ಲದೆ ನಾನು ಏನು ಹೇಳಲಿ. ಇದೆಲ್ಲಾ ಪರಿಸ್ಥಿತಿಗಳು. ನಾವು ತಪ್ಪು ಮಾಡಲಿ ಇನ್ನೋಬ್ಬರು ತಪ್ಪು ಮಾಡಲಿ ಕಾನೂನು ಅದು. ನಾವು ಏನು ಮಾಡೊಕ್ಕೆ ಆಗಲ್ಲ, ಕಾನೂನು ಪ್ರಕಾರ ಹೋಗಬೇಕು ಅಷ್ಟೆ ಎಂದು ಹೇಳಿದರು.

 

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

42 mins ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

6 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

6 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

6 hours ago