ಮಂಡ್ಯ

ಸಿದ್ದರಾಮಯ್ಯ ಮುಗಿಸುವುದಕ್ಕೆ ಕಾಂಗ್ರೆಸ್ ನಿಂದಲೇ ಸಾಕಷ್ಟು ಪಿತೂರಿ ನಡೆದಿದೆ ; ಕುಮಾರಸ್ವಾಮಿ

ಮಂಡ್ಯ : ಸಿಎಂ ಸಿದ್ದರಾಮಯ್ಯರನ್ನ ಮುಗಿಸುವುದಕ್ಕೆ ಕಾಂಗ್ರೆಸ್‌ ನಿಂದಲೇ ಸಾಕಷ್ಟು ಪಿತೂರಿ ನಡೆದಿದೆ . ಇಷ್ಟು ದಿನ ಇಲ್ಲದ ಮುಡಾ ಹಗರಣ ಈ ಯಾಕೆ ಹೊರಗೆ ಬಂದಿದೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಂಡ್ಯದಲ್ಲಿ ಮುಡಾ ಹಗರಣ ವಿಚಾರಕ್ಕೆ ಸಂಬಂಧಪಪಟ್ಟಂತೆ ಮಾತನಾಡಿದ ಅವರು, ಮೈಸೂರು ಮುಡಾ ಹಗರಣ ಹಳೆಯ ಸುದ್ದಿ. ಈ ಹಗರಣ ದೊಡ್ಡ ಪ್ರಚಾರ ಪಡೆಯುವುದರ ಹಿಂದೆ ಕಾಂಗ್ರೆಸ್ಸಿಗರ ಸಂಚು ಇದೆ. ಸಿಎಂ ಸ್ಥಾನಕ್ಕಾಗಿ ಆಸೆ ಪಟ್ಟು, ಟವೆಲ್‌ ಹಾಸಿ ಕುಳಿತಿರುವವರ ಕೈವಾಡವಿದೆ. ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ತೆಗೆದು ಸಿಎಂ ನಾವಾಗಬೇಕೆಂದು ಕಾಯುತ್ತಿದ್ದಾರೆ ಎಂದು ಪರೋಕ್ಷವಾಗಿ ಡಿಸಿಎಂ  ಡಿಕೆ ಶಿವಕುಮಾರ್‌ ವಿರುದ್ಧ ಆರೋಪ ಮಾಡಿದರು.

ಅಲ್ಲದೆ ಸಿದ್ದರಾಮಯ್ಯ ಇಮೇಜ್‌ ಹಾಳು ಮಾಡಲು ಪ್ಲಾನ್‌ ಮಾಡಿದ್ದಾರೆ. ಮುಡಾದಲ್ಲಿ ಸಿಎಂ ಮಾಡಿರುವ ವ್ಯವಹಾರಗಳ ದಾಖಲಾತಿ ತೆಗೆದು ವಕೀಲರನ್ನ ಇಟ್ಟು ಸಿಎಂ ಮುಗಿಸಲಿಕ್ಕೆ ಪಿತೂರಿ ನಡೆದಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಎಂದು ಎಚ್‌ ಡಿಕೆ ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

19 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

19 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

19 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

19 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

19 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

22 hours ago