ಮಂಡ್ಯ

ಕೆರೆಗಳಿಗೆ ನೀರು ತುಂಬಿಸಲು ಸೂಚಿಸಿದ ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಕೆ‌.ಆರ್.ಎಸ್ ನ ಕಾವೇರಿ ಸಭಾಂಗಣದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಮಾತನಾಡಿದರು. ಇದು ಉತ್ತಮ ಸಮಯವಾಗಿದ್ದು, ತಾಲ್ಲೂಕುಗಳ ಕೊನೆಯ ಭಾಗದಲ್ಲಿರುವ ಕೆರೆಗಳಿಗೆ ನೀರು ತುಂಬುವಂತೆ ನೋಡಿಕೊಳ್ಳಿ ಎಂದರು.

ಕೆ.ಆರ್.ಎಸ್ ಜಲಾಶಯ ತುಂಬಿದ್ದು, ರೈತರು, ಜನಪ್ರತಿನಿಧಿಗಳು ಹಾಗೂ ಸಂಘಟನೆಗಳಿಂದ ಕೃಷಿ ಪದ್ಧತಿಗೆ ನೀರು ಸಿಗುತ್ತಿಲ್ಲ ಎಂಬ ದೂರು ಬಾರದಂತೆ ನೋಡಿಕೊಂಡು ಎಚ್ಚರಿಕೆಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.

ಕೆರೆಗಳಿಂದ ಹೂಳು ತೆಗೆಯುವ ಕೆಲಸ ಹಾಗೂ‌ ಕೆರೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಇಲ್ಲ. ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಅನುದಾನ ಪಡೆದು ಕೆರೆಗಳ ನಿರ್ವಹಣೆಯ ಕಾಮಗಾರಿಗಳನ್ನು ನಡೆಸಿ ಎಂದರು.

ರೈತರ ಪರವಾಗಿ ಸದಾ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತದೆ. ಮುಂಗಾರು ಬೆಳೆಗೆ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ಒದಗಿಸುವಂತೆ ಕೃಷಿ ಇಲಾಖೆಗೆ ಸೂಚನೆ ನೀಡಲಾಗಿದೆ. ಕೃಷಿ ಚಟುವಟಿಕೆಗಳು ಚುರುಕಾಗಿದ್ದು, ರೈತರಿಗೆ ಬೇಕಿರುವ ಮಾಹಿತಿಯನ್ನು ಒದಗಿಸಿ ಎಂದರು‌.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಮಾತನಾಡಿ ಸದ್ಯದ ಪರಿಸ್ಥಿತಿಯಲ್ಲಿ ಕೃಷಿಗೆ ಯಾವುದೇ ತೊಂದರೆ ಇಲ್ಲ. ಬೇಸಿಗೆ ಬೆಳೆಗೆ ಬೇಕಿರುವ ನೀರಿನ ಬಗ್ಗೆ ಯೋಜನೆ ರೂಪಿಸಬೇಕಿದೆ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು. ಕೆ.ಆರ್.ಎಸ್.ಅಣೆಕಟ್ಟಿನಲ್ಲಿ ಕಳೆದ 10 ವರ್ಷಗಳಲ್ಲಿ ಬೀತಿನ ಪ್ರಮಾಣ ಹಾಗೂ ನೀರು ಹರಿಸಿದ ವಿವರಗಳನ್ನು ಸಭೆಗೆ ವಿವರಿಸಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ವಿಧಾನ ಪರಿಷತ್ ಶಾಸಕ ಮಧು.ಜಿ.ಮಾದೇಗೌಡ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕಾ.ನೀ.ನಿ.ನಿ ಅಧೀಕ್ಷಕ ಅಭಿಯಂತರ ರಘುರಾಮ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು ‌

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

35 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

2 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago