ಮಂಡ್ಯ: ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಬಾಲಕಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹನಕೆರೆ ಗ್ರಾಮದಲ್ಲಿಂದು (ಸೆ.1) ನಡೆದಿದೆ.
15 ವರ್ಷದ ಇಂಪನಾ ಮೃತ ಬಾಲಕಿಯಾಗಿದ್ದಾರೆ. ಈ ಬಾಲಕಿಯನ್ನು ಪ್ರೀತಿಸುವ ವಿಚಾರಕ್ಕೆ ಬಾಲಕರ ಗುಂಪಿನಲ್ಲಿ ಮಾತಿನ ಚಕಮಕಿ ನಡೆದಿದೆ. ಜೊತೆಗೆ ಬಾಲಕರು ಕೂಡಾ ಯುವತಿಯನ್ನು ಪ್ರೀತಿಸುವಂತೆ ಪೀಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕಿ ಇಂಪನಾ ನೇಣಿಗೆ ಶರಣಾಗಿದ್ದಾರೆ.
ಈ ಬಾಲಕಿಯನ್ನು ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕರ ನಡುವೆ ನಡೆದಿರುವ ಮಾತಿನ ಚಕಮಕಿಯ ಆಡಿಯೋ ಕೂಡಾ ವೈರಲ್ ಆಗಿದೆ. ರೊಚ್ಚಿಗೆದ್ದ ಬಾಲಕರು ಈ ಆಡಿಯೋವನ್ನು ಇಂಪನಾ ತಾಯಿಯ ವಾಟ್ಸಾಪ್ ನಂಬರ್ಗೂ ಕಳುಹಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ವಿಚಾರಗಳಿಂದ ಕುಗ್ಗಿದ ಬಾಲಕಿ ನೇಣು ಬಿಗಿದುಕೊಂಡು ಮರಣ ಹೊಂದಿದ್ದಾರೆ.
ಈ ಘಟನೆ ಬಳಿಕ ಬಾಲಕರು ಪರಾರಿಯಾಗಿದ್ದಾರೆ. ಪರಾರಿಯಾದ ಬಾಲಕರ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಸಿಕೊಂಡ ಪೊಲೀಸರು ಕಾಣೆಯಾಗಿರುವ ಬಾಲಕರ ಪತ್ತೆಗೆ ಬಲೆ ಬೀಸಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…