ಮಂಡ್ಯ: ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಬಾಲಕಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹನಕೆರೆ ಗ್ರಾಮದಲ್ಲಿಂದು (ಸೆ.1) ನಡೆದಿದೆ.
15 ವರ್ಷದ ಇಂಪನಾ ಮೃತ ಬಾಲಕಿಯಾಗಿದ್ದಾರೆ. ಈ ಬಾಲಕಿಯನ್ನು ಪ್ರೀತಿಸುವ ವಿಚಾರಕ್ಕೆ ಬಾಲಕರ ಗುಂಪಿನಲ್ಲಿ ಮಾತಿನ ಚಕಮಕಿ ನಡೆದಿದೆ. ಜೊತೆಗೆ ಬಾಲಕರು ಕೂಡಾ ಯುವತಿಯನ್ನು ಪ್ರೀತಿಸುವಂತೆ ಪೀಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕಿ ಇಂಪನಾ ನೇಣಿಗೆ ಶರಣಾಗಿದ್ದಾರೆ.
ಈ ಬಾಲಕಿಯನ್ನು ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕರ ನಡುವೆ ನಡೆದಿರುವ ಮಾತಿನ ಚಕಮಕಿಯ ಆಡಿಯೋ ಕೂಡಾ ವೈರಲ್ ಆಗಿದೆ. ರೊಚ್ಚಿಗೆದ್ದ ಬಾಲಕರು ಈ ಆಡಿಯೋವನ್ನು ಇಂಪನಾ ತಾಯಿಯ ವಾಟ್ಸಾಪ್ ನಂಬರ್ಗೂ ಕಳುಹಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ವಿಚಾರಗಳಿಂದ ಕುಗ್ಗಿದ ಬಾಲಕಿ ನೇಣು ಬಿಗಿದುಕೊಂಡು ಮರಣ ಹೊಂದಿದ್ದಾರೆ.
ಈ ಘಟನೆ ಬಳಿಕ ಬಾಲಕರು ಪರಾರಿಯಾಗಿದ್ದಾರೆ. ಪರಾರಿಯಾದ ಬಾಲಕರ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಸಿಕೊಂಡ ಪೊಲೀಸರು ಕಾಣೆಯಾಗಿರುವ ಬಾಲಕರ ಪತ್ತೆಗೆ ಬಲೆ ಬೀಸಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…