attack wage laborers
ಕಿಕ್ಕೇರಿ : ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇವನಹಳ್ಳಿ ಅಮಾನಿಕೆರೆಯನ್ನು ನರೇಗಾ ಯೋಜನೆಯಡಿ 100ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಹೂಳೆತ್ತುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ವಿನಾ ಕಾರಣ ಮಹಿಳಾ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕೂಲಿಕಾರರು ಪ್ರತಿಭಟನೆ ನಡೆಸಿದರು.
ಮಂದಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೇವನಹಳ್ಳಿ, ಶ್ರವಣಹಳ್ಳಿ, ಚಿಕ್ಕಮಂದಗರೆ, ಅಲೇನಹಳ್ಳಿ ಗ್ರಾಮಗಳ ಕೂಲಿ ಕಾರ್ಮಿಕರು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಬೇವನಹಳ್ಳಿ ಅಮಾನಿಕೆರೆ ಹೂಳೆತ್ತವ ಅಭಿವೃದ್ಧಿ ಕೆಲಸ ಮಾಡುತ್ತಿದ್ದು, ಸ್ಥಳೀಯ ಕೆಲ ಕಿಡಿಗೇಡಿಗಳು ಪದೇ ಪದೇ ಕೆಲಸ ಮಾಡದಂತೆ ತಡೆಯೊಡ್ಡಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.
ನಾಲ್ವರ ವಿರುದ್ಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿ ಕೂಲಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದರು.
ಬಳಿಕ ಕರ್ನಾಟಕ ಪ್ರಾಂತ್ಯ ಕೂಲಿ ಕಾರ್ಮಿಕರ ಸಂಘದ ತಾಲ್ಲೂಕು ಕಾರ್ಯದರ್ಶಿ ಗೋಪಾಲ್ ಮತ್ತು ಮುಖಂಡರಾದ ಚಿಕ್ಕಮಂದಗರೆ ಸುರೇಶ್ ಮಾತನಾಡಿ, ಕೂಲಿ ಕಾರ್ಮಿಕರು ಕಾರ್ಯನಿರ್ವಹಿಸಿದರೆ ನಮಗೆ ಕೆಲಸ ಇಲ್ಲದಂತಾಗುತ್ತದೆ ಎಂದು ಯಂತ್ರೋಪಕರಣಗಳಲ್ಲಿ ಕೆಲಸ ಮಾಡುವ ಬಲಾಢ್ಯರ ಕುಮ್ಮಕ್ಕಿನಿಂದ ನಮ್ಮ ಕೂಲಿ ಕಾರ್ಮಿಕರಿಗೆ ಇಲ್ಲ ಸಲ್ಲದ ತೊಂದರೆ ನೀಡುತ್ತಿದ್ದಾರೆ. ಇವರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಕೂಲಿ ಕಾರ್ಮಿಕರಾದ ಪವಿತ್ರ, ನೀಲಮ್ಮ, ನಟರಾಜು, ಅನಿತ, ರಾಣಿ, ಕಾಂತಾಮಣಿ, ಕಾವ್ಯ, ರಾಧಾ, ಪಾರ್ವತಮ್ಮ, ಸಾಕಮ್ಮ, ಗಿಡ್ಡಮ್ಮ, ಲಕ್ಷ್ಮಮ್ಮ, ಯಶೋಧಮ್ಮ, ಪುಟ್ಟಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…